ಬೆಂಗಳೂರು | ಅನಿರೀಕ್ಷಿತವಾಗಿ ಬೈಕ್‌ ಸವಾರನಿಗೆ ಗುದ್ದಿದ ‘ಕೋಲೆ ಬಸವ’: ವಿಡಿಯೋ ವೈರಲ್

Date:

Advertisements

ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೋಲೆ ಬಸವ ಬೈಕ್ ಸವಾರನೊಬ್ಬನಿಗೆ ಏಕಾಏಕಿ ಗುದ್ದಿ ಓಡಿ ಹೋಗಿದೆ. ಪರಿಣಾಮ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ಸಮಯಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ.

ನಗರದ ಮಹಾಲಕ್ಷ್ಮೀ ಲೇಔಟ್ ಸ್ವಿಮ್ಮಿಂಗ್ ಪೂಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ರಸ್ತೆ ಬದಿ ಮಹಿಳೆಯೊಬ್ಬರು ಕೋಲೆ ಬಸವನನ್ನು ಹಿಡಿದುಕೊಂಡು ಬರುತ್ತಿದ್ದರು. ಈ ವೇಳೆ, ಎದುರಿಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ಕೋಲೆ ಬಸವ ಎರಗಿ ಓಡಿ ಹೋಗಿದೆ. ಈ ವೇಳೆ, ಬೈಕ್ ಸವಾರನ ವಿರುದ್ಧ ದಿಕ್ಕಿನಲ್ಲಿ ಕ್ಯಾಂಟರ್ ವಾಹನ ಬರುತ್ತಿತ್ತು. ಬೈಕ್ ಸವಾರ ಕ್ಯಾಂಟರ್​ ಚಕ್ರದಡಿಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಚಾಲಕ ಬ್ರೇಕ್ ಹಾಕಿ ಕ್ಯಾಂಟರ್ ನಿಲ್ಲಿಸಿದ್ದಾನೆ. ಇದರಿಂದ ಬೈಕ್​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Advertisements

ಇದನ್ನು ಓದಿದ್ದೀರಾ? ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ಘಟನೆ ವೇಳೆ, ಸ್ಕೂಟರ್‌ ಸವಾರ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಬೇಕಿತ್ತು. ಆದರೆ, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿದಂತಾಗಿದೆ.

Kole basava

ಕೋಲೆ ಬಸವ ಈ ರೀತಿ ಒಮ್ಮಿಂದೊಮ್ಮೆಲೇ ವರ್ತಿಸಿದ್ದು, ಜನರಲ್ಲಿ ಭಯ ಬೀಳಿಸುವಂತಿದೆ. ಸದ್ಯ ಈ ಅಪಘಾತದ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.

ಅಲ್ಲದೇ, ಈ ಘಟನಾ ಸ್ಥಳದಲ್ಲಿ ವಾಹನಗಳು ಸಂಚರಿಸಲು ಎರಡು ಬದಿ ರಸ್ತೆಗಳಿವೆ. ಆದರೆ, ಒಂದು ಬದಿಯ ರಸ್ತೆಯ ಮೇಲೆ ವಾಹನಗಳನ್ನು ಪಾರ್ಕ್‌ ಮಾಡಲಾಗಿದೆ. ಪಾದಚಾರಿಗಳು ಈ ರಸ್ತೆಯಲ್ಲಿ ನಡೆದುಕೊಂಡು ಓಡಾಡುವಂತಾಗಿದೆ. ಅಲ್ಲದೇ, ದನಗಳು ಕೂಡ ರಸ್ತೆಯಲ್ಲಿ ಓಡಾಡುವಂತಾಗಿದೆ. ಸರಿಯಾದ ಪಾದಚಾರಿ ಮಾರ್ಗ ಇಲ್ಲದಿರುವುದು ಈ ಘಟನೆಗೆ ಕಾರಣ ಎಂದು ಹಲವರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X