ಕೇಂದ್ರದಲ್ಲಿ ಡಾ ಮನಮೋಹನ್ ಸಿಂಗ್ರವರು ಪ್ರಧಾನಿಯಾಗಿದ್ದಾಗ ಬೀದಿಬದಿ ವ್ಯಾಪಾರಿಗಳ ಭದ್ರತೆಗೆ ಕಾನೂನನ್ನು ರೂಪಿಸಿದ್ದರು. ಅದರಂತೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೂಡ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ಮಾಡುವ ಸ್ಥಳದಲ್ಲಿ ಚಿಕ್ಕಮಳಿಗೆಗಳನ್ನು, ತಳ್ಳು ಗಾಡಿಗಳನ್ನು ನೀಡಲು ₹20ಕೋಟಿ ಅನುದಾನವನ್ನು ಕಾಯ್ದಿರಿಸಿದ್ದಾರೆ ಎಂದು ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷ ಡಾ ಸಿ ಇ ರಂಗಸ್ವಾಮಿ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ವಿಭಾಗದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ವಿಜಯಪುರ ಮಹಾನಗರಪಾಲಿಕೆಯಲ್ಲಿ 1 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಇದರ ಸದುಪಯೋಗವನ್ನು ಬೀದಿಬದಿ ವ್ಯಾಪಾರಿಗಳು ಪಡೆದುಕೊಳ್ಳಬೇಕು. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ತಮ್ಮ ಬಳಿ ಬರುವ ಗ್ರಾಹಕರ ಮನವೊಲಿಸಲು ಪ್ರಯತ್ನಿಸಬೇಕು” ಎಂದು ಕರೆ ನೀಡಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಡಾ.ಬಾಬು ಜಗಜೀವನರಾಮ್ ಅವರ 117ನೇ ಜನ್ಮದಿನ ಆಚರಣೆ
ರಾಜ್ಯ ಉಪಾಧ್ಯಕ್ಷ ಮಣಿಗೌಡ, ಜಿಲ್ಲಾಧ್ಯಕ್ಷ ಲಾಲಸಾಬ ಕೊರಬು, ಒಬಿಸಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಅಬ್ದುಲ್ ಸತ್ತಾರ ಬಾಗವಾನ, ಮೈಬೂಬ ವಾಟಿ, ರಮಜಾನ ಶೇಖ, ಅನಿಲ್ ಚವ್ಹಾಣ, ಮೈಬೂಬ ಜಾಗಿರದಾರ, ಜುಮ್ಮಣ್ಣ ತಾಳಿಕೋಟಿ, ಚಾಂದಸಾಬ ದೇಸಾಯಿ, ಶರಣಮ್ಮ ನಾಯಕ, ಸಿದ್ದು ಹಡಪದ, ವಿದ್ಯಾಶ್ರೀ, ಭಾಗ್ಯಶ್ರೀ, ಜಯರಾಬಿ ಚೌದರಿ, ಎಂ ಎಂ ಮುಲ್ಲಾ, ಫಿರೋಜ ಶೇಖ, ಸೋಮಣ್ಣ ತಳವಾರ, ಕೃಷ್ಣಾ ಲಮಾಣಿ, ಸಂತೋಷ ಬಾಲಗಾಂವಿ, ಮಹಾದೇವ ಜಾಧವ, ಎ ಆರ್ ಕಂಬಾಗಿ, ಜಯಪ್ರಭು ಕೊಳಮಲಿ, ಭೀಮರಾಯ ಸೀತಿಮನಿ, ಮಹಾಲಿಂಗ ಕೆಂಗಲಗುತ್ತಿ, ರಮೇಶ ಪೂಜಾರಿ, ಶಾಂತವ್ವ ಹೊಸಮನಿ, ಅಬ್ದುಲ್ಪೀರಾ ಜಮಖಂಡಿ, ಬಸಪ್ಪ ಕೋಲಕಾರ ಇದ್ದರು.
