ಅಬಕಾರಿ ನೀತಿ ಪ್ರಕರಣ | ತಿಹಾರ್‌ ಜೈಲಿನಲ್ಲಿ ವಿಚಾರಣೆ ನಡೆಸುತ್ತೇವೆಂದ ಸಿಬಿಐ; ಕೋರ್ಟ್‌ ಮೊರೆ ಹೋದ ಕವಿತಾ

Date:

Advertisements

ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ. ಸಿಬಿಐ ನಿರ್ಧಾರವನ್ನು ವಿರೋಧಿಸಿ ಕವಿತಾ ಅವರು ಕೋರ್ಟ್‌ನಲ್ಲಿ ಶನಿವಾರ ಅರ್ಜಿ ಸಲ್ಲಿಸಿದ್ದಾರೆ.

ಕವಿತಾ ಅವರನ್ನು ತಿಹಾರ್‌ ಜೈಲಿನಲ್ಲಿ ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಸಿಬಿಐ ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಕೋರ್ಟ್‌, ಶುಕ್ರವಾರ ಅನುಮತಿ ನೀಡಿದೆ.

ಕವಿತಾ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲ ನಿತೇಶ್ ರಾಣಾ, “ಸಿಬಿಐ ಕಾನೂನು ಪ್ರಕ್ರಿಯೆಯನ್ನು ಉಲ್ಲಂಘಿಸುತ್ತಿದೆ. ನ್ಯಾಯಾಲಯದಿಂದ ಅನುಕೂಲಕರ ಆದೇಶವನ್ನು ಪಡೆಯಲು ಸಿಬಿಐ ಸತ್ಯವನ್ನು ಬಹಿರಂಗಪಡಿಸಿಲ್ಲ. ಇದು ನನಗೆ ತೀವ್ರ ಆತಂಕವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ.

Advertisements

“ಕವಿತಾ ಪರವಾದ ವಾದ ಕೇಳುವವರೆಗೂ ಆದೇಶವನ್ನು ಹಿಂಪಡೆಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ನ್ಯಾಯಾಲಯವು ಕವಿತಾ ಅವರ ಮನವಿಯನ್ನು ಶನಿವಾರದ ನಂತರ ಆಲಿಸುವ ಸಾಧ್ಯತೆಯಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 15 ರಂದು ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಕಳೆದ ಮಂಗಳವಾರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಗುರುವಾರ (ಏಪ್ರಿಲ್ 4) ತನ್ನ 16 ವರ್ಷದ ಮಗನ ಪರೀಕ್ಷೆಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಮನವಿ ಮಾಡಿದ್ದರು. ಪರೀಕ್ಷೆಯ ವೇಳೆ ಮಗನಿಗೆ ತಾಯಿಯ ನೈತಿಕ ಮತ್ತು ಭಾವನಾತ್ಮಕ ಬೆಂಬಲದ ಅಗತ್ಯ ಇರುತ್ತದೆ ಎಂದು ಅವರು ಮನವಿಯಲ್ಲಿ ಹೇಳಿದ್ದರು.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ‘ಸೌತ್ ಗ್ರೂಪ್’ನ ಪ್ರಮುಖ ಸದಸ್ಯೆ ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X