ಐಪಿಎಲ್ | ಬಟ್ಲರ್ ಶತಕ: ಆರ್‌ಸಿಬಿಗೆ ಸೋಲುಣಿಸಿದ ರಾಜಸ್ಥಾನ

Date:

Advertisements

ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಐಪಿಎಲ್‌ನ 8ನೇ ಶತಕ ಹಾಗೂ ಸವಾಲಿನ ಮೊತ್ತ ಗಳಿಸಿದ ಹೊರತಾಗಿಯೂ, ಕಳಪೆ ಬೌಲಿಂಗ್ ಪ್ರದರ್ಶನದಿಂದ ಮತ್ತೆ ಮುಖಭಂಗ ಅನುಭವಿಸಿದೆ.

ಐಪಿಎಲ್‌ನ 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ (ಆರ್‌ಆರ್‌) ತಂಡದ ವಿರುದ್ಧ ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್‌ಗಳ ಸೋಲು ಕಂಡಿದೆ.

184 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ಅವರ ಅಮೋಘ ಶತಕ ಮತ್ತು ಸಂಜು ಸ್ಯಾಮ್ಸನ್ ಅವರ ಅರ್ಧಶತಕದ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

Advertisements

ಇನ್ನಿಂಗ್ಸ್ ಆರಂಭಿಸಿದಾಗ ಯಶಸ್ವಿ ಜೈಸ್ವಾಲ್(0)ವಿಕೆಟನ್ನು ಬೇಗನೆ ಕಳೆದುಕೊಂಡರೂ ಕೂಡ ರಾಜಸ್ಥಾನದ ಪರ 2ನೇ ವಿಕೆಟ್‌ಗೆ 148 ರನ್ ಗಳಿಸಿದ ಬಟ್ಲರ್ ಹಾಗೂ ಸ್ಯಾಮ್ಪನ್ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.

ನಾಯಕ ಸ್ಯಾಮ್ಸನ್(69 ರನ್, 42 ಎಸೆತ, 8 ಬೌಂಡರಿ, 2 ಸಿಕ್ಸರ್)ಅರ್ಧಶತಕ ಗಳಿಸಿ ಔಟಾದರು.

ರಿಯಾನ್ ಪರಾಗ್ (4 ರನ್), ಧ್ರುವ್ ಜುರೆಲ್ (2 ರನ್) ಅಲ್ಪ ಮೊತ್ತಕ್ಕೆ ಔಟಾದರು.

ಕೊನೆಯಲ್ಲಿ ಇನ್ನೂ 5 ಎಸೆತ ಇರುವಾಗ 94 ರನ್ ಗಳಿಸಿದ್ದ ಬಟ್ಲರ್ 19.1 ಓವರ್‌ನಲ್ಲಿ ಸಿಕ್ಸ್ ಬಾರಿಸಿ, ಜಯ ತಂದು ಕೊಟ್ಟದ್ದಲ್ಲದೇ, ಶತಕ ಕೂಡ ಬಾರಿಸಿದರು. ಆಡಿದ 100ನೇ ಐಪಿಎಲ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ರೀಸ್ ಟೋಪ್ಲೆ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರೆ, ಯಶ್ ದಯಾಳ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು, ಈವರೆಗೆ ಆಡಿದ ನಾಲ್ಕೂ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಆರ್‌ಸಿಬಿ ತಂಡ ಆಡಿದ 5 ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಒಂದು ಗೆಲುವು ಪಡೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X