ಕೇರಳ | ಯೂಟ್ಯೂಬರ್ ಮೇಲೆ ಗುಂಪು ಹಲ್ಲೆ – ಹತ್ಯೆ; 10 ಮಂದಿ ಬಂಧನ

Date:

Advertisements

ವಲಸೆ ಕಾರ್ಮಿಕನಾಗಿದ್ದ ಯೂಟ್ಯೂಬರ್ ಒಬ್ಬರು ಗುರುವಾರ ರಾತ್ರಿ ಕೇರಳದ ಮುವಾಟ್ಟುಪುಳ ಬಳಿಕ ವಳಕೊಮ್‌ನಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೆ ಗುಂಪು ಹಲ್ಲೆಯೇ ಕಾರಣವಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದ ಅಶೋಕ್‌ ದಾಸ್ (24) ಮೃತ ದುರ್ದೈವಿ. ಅವರು ವಾಲಕೋಮ್‌ನ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಅವರ ಮೇಲೆ 10 ಮಂದಿ ಗುಂಪು ಹಲ್ಲೆ ನಡೆಸಿ, ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರನ್ನು – ವಿಜೇಶ್, ಅನೀಶ್, ಸತ್ಯನ್, ಸೂರಜ್, ಕೇಶವ್, ಇಲಿಯಾಸ್ ಕೆ ಪಾಲ್, ಅಮಲ್, ಅತುಲ್ ಕೃಷ್ಣ, ಎಮಿಲ್ ಮತ್ತು ಸನಲ್ – ಎಂದು ಗುರುತಿಸಲಾಗಿದೆ. ಎಲ್ಲರೂ ವಳಕೋನ್‌ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

Advertisements

“ಆರೋಪಿಗಳ ಗುಂಪು ಅಶೋಕ್ ಮೇಲೆ ಹಲ್ಲೆ ನಡೆಸಿದ್ದು, ಅನೈತಿಕ ಪೊಲೀಸ್ ಗಿರಿ ನಡೆಸಿದೆ. ಅಶೋಕ್‌ಗೆ ತಲೆ ಮತ್ತು ಎದೆಗೆ ಗಾಯಗಳಾಗಿವೆ. ಮರಣೋತ್ತರ ಪರೀಕ್ಷೆಯು ಗಾಯಗಳನ್ನು ದೃಢಪಡಿಸಿದೆ. ಅಶೋಕ್‌ನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಬಂಧಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ” ಎಂದು ಎರ್ನಾಕುಲಂ ಗ್ರಾಮಾಂತರ ಪೊಲೀಸ್ ಅಧಿಕಾರಿ ವೈಭವ್ ಸಕ್ಸೇನಾ ತಿಳಿಸಿದ್ದಾರೆ.

ವಾಲಕೊಮ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಮಹಿಳಾ ಸಹೋದ್ಯೋಗಿಯ ಮನೆಯಿಂದ ಅಶೋಕ್‌ನನ್ನು ಗುಂಪೊಂದು ಎಳೆದೊಯ್ದು ಥಳಿಸಿದೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಅಶೋಕ್ ಅವರನ್ನು ಕಂಬಕ್ಕೆ ಕಟ್ಟಿಹಾಕುವ ಮೊದಲು ಮತ್ತು ನಂತರ ಹಲ್ಲೆ ನಡೆಸಲಾಗಿದೆ. ಅಶೋಕ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆತನ ಸ್ನೇಹಿತೆ ಮತ್ತು ಆಕೆಯ ಮನೆಯವರು ಹೇಳಿಕೆ ನೀಡಿದ್ದಾರೆ.

ಒನ್ಮನೋರಮಾ ವರದಿಯ ಪ್ರಕಾರ ಅಶೋಕ್ ದಾಸ್ ಯೂಟ್ಯೂಬರ್ ಆಗಿದ್ದು, ಅವರು ಹತ್ಯೆಯಾಗುವ 11 ದಿನಗಳ ಮೊದಲು ‘ಲಾಸ್ಟ್ ಆಫ್ ಟೈಮ್’ ಎಂಬ ಶೀರ್ಷಿಕೆಯಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X