ಬೆಂಗಳೂರು | ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ ಪುಡಿರೌಡಿಗಳು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ಹೆಚ್ಚಳವಾಗಿದ್ದು, ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪುಡಿರೌಡಿಗಳು ಕುಡಿದ ಮತ್ತಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಲಾಂಗ್ ಬೀಸಿದ ಘಟನೆ ಕುಮಾರಸ್ವಾಮಿ ಲೇಔಟ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಏಪ್ರಿಲ್ 4ರ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಚಾಲಕ ನಾಗೇಂದ್ರ ಎಂಬುವವರಿಗೆ ತಲೆ, ಕಣ್ಣಿನ ಕೆಳಭಾಗ ಹಾಗೂ ಎಡಕೈಗೆ ಗಾಯವಾಗಿದೆ. ಇನ್ನು ಮಚ್ಚು ಬಿಸುತ್ತಾ ಓಡಿಸಿಕೊಂಡು ಬರುವ ದೃಶ್ಯ ಮೊಬೈಲ್‌ವೊಂದರಲ್ಲಿ ಸೆರೆಯಾಗಿದೆ.

ಏ.4ರಂದು ಮಾರ್ಗ ಸಂಖ್ಯೆ 15E/2ರಲ್ಲಿ ಬಿಎಂಟಿಸಿ ಬಸ್ ಚಾಲಕ ನಾಗೇಂದ್ರ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಡರಾತ್ರಿ 15 ಇ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಮುಗಿಸಿ ನಿರ್ವಾಹಕ ಹಾಗೂ ಚಾಲಕ ಮಲಗಿದ್ದರು. ಬಸ್ ನಿಲ್ದಾಣಕ್ಕೆ ಬಂದ 4 ಜನ ಅಪರಿಚಿತರು ನಿಲ್ದಾಣದಲ್ಲಿ ಜೋರಾಗಿ ಕೂಗಾಡುತ್ತಿದ್ದರು.

Advertisements

“ಆ ವೇಳೆ ನಾನು ಬಸ್‌ನಲ್ಲಿಯೇ ಕುಳಿತುಕೊಂಡು ಅವರಿಗೆ ಇಲ್ಲಿ ಕೂಗಾಡಬೇಡಿ ಎಂದಿದ್ದೆ. ಆಗ ಅವರಲ್ಲಿ ಒಬ್ಬ ನಾವು ಏನಾದರೂ ಮಾಡುತ್ತೇವೆ ನಿನಗೆ ಯಾಕಲೇ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ” ಎಂದು ನಿರ್ವಾಹಕರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ 10ಕ್ಕೇರಿದ ಕಾಲರಾ ಪ್ರಕರಣಗಳ ಸಂಖ್ಯೆ : ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!

ಆಗ ಬಸ್‌ನಿಂದ ಕೆಳಗಡೆ ಇಳಿದು ಯಾಕಪ್ಪ ಆ ರೀತಿ ಬೈಯುತ್ತೀಯಾ ಎಂದು ಚಾಲಕ ಕೇಳಿದ್ದು, ಆವಾಗ ಚಾಲಕನ‌ ಮೇಲೆ ಕೈಗಳಿಂದ ಮುಖಕ್ಕೆ ಹಾಗೂ ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ಆತನ ಪಕ್ಕದಲ್ಲಿದ್ದ ಇನ್ನೊಬ್ಬನಿಂದ ಚಾಲಕನ ತಲೆಗೆ ಮಚ್ಚಿನಿಂದ ದಾಳಿ ನಡೆಸಿದ್ದು, ಮತ್ತೆ ಮಚ್ಚಿನಿಂದ ಹೊಡೆಯಲು ಬಂದಾಗ, ಚಾಲಕ ಹಾಗೂ ನಿರ್ವಾಹಕ ಅಲ್ಲಿಂದ ಓಡಿ‌ ಹೋಗಿದ್ದಾರೆ. ಬಳಿಕ ಕಂಡಕ್ಟರ್ ಸಹಾಯದಿಂದ ವಾಸವಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದು, ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಚಾಲಕ ದೂರು ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X