ನಾವು ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ವಂಚಿಸಲ್ಲ; ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

Advertisements

“ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡು, ಆರು ಕಿಲೋಮೀಟರ್ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.

“ಸಂಸದ ತೇಜಸ್ವಿ ಸೂರ್ಯ ಸಂಸದರಾಗಿ ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಮೋದಿ ಮುಖ ತೋರಿಸಿ ಓಟು ಕೇಳುವ ದುರ್ಗತಿ ಬಿಜೆಪಿಗೆ ಬಂದಿದೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವ ಮುಖ ಇಲ್ಲ. ಏಕೆಂದರೆ ಇವರು ಅಭಿವೃದ್ಧಿ ಕಾರ್ಯಗಳನ್ನೇ ಮಾಡಿಲ್ಲ” ಎಂದು ಕಿಡಿಕಾರಿದರು.

Advertisements

“ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತೀಯರಿಗೆ ಕೊಟ್ಟ ಒಂದು ಮಾತನ್ನೂ ಉಳಿಸಿಕೊಂಡಿಲ್ಲ. ಕಪ್ಪುಹಣ ವಾಪಸ್ ತರಲಿಲ್ಲ. ಭಾರತೀಯರ ಖಾತೆಗೆ 15 ಲಕ್ಷ ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ. ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ” ಎಂದು ಪ್ರಶ್ನಿಸಿದರು.‌

ಇದನ್ನು ಓದಿದ್ದೀರಾ? ‘ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವರ ಪತ್ನಿ ದೂರು

“ಸೌಮ್ಯರೆಡ್ಡಿ ಗೆದ್ದರೆ ನಾನು ಗೆದ್ದಂತೆ. ನಿಮ್ಮ ಹೃದಯದ ಮಾತು ಕೇಳಿ ಮತ ಹಾಕಿ. ಬರೀ ಭಾವನಾತ್ಮಕವಾಗಿ ಕೆರಳಿ ಮತ ಹಾಕಿದ್ದಕ್ಕೆ ಹತ್ತು ವರ್ಷದಲ್ಲಿ ದೇಶಕ್ಕೆ, ನಿಮಗೆ ಸಿಕ್ಕಿದ್ದೇನು” ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೌಮ್ಯರೆಡ್ಡಿಯವರನ್ನು ಗೆಲ್ಲಿಸಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಿ ಎಂದು ಕೋರಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X