ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

Date:

Advertisements

“ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಪುರುಲಿಯಾದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ರ್‍ಯಾಲಿಗಳು ಮತ್ತು ಸಭೆಗಳನ್ನು ನಡೆಸಿ, ಆದರೆ ನೀವು ಗಲಭೆ ಮಾಡಬೇಡಿ. ಅವರೇ (ಬಿಜೆಪಿ) ಗಲಭೆ ಮಾಡುತ್ತಾರೆ. ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಏಪ್ರಿಲ್ 17 ರಂದು ಗಲಭೆ ನಡೆಯಲಿದೆ” ಎಂದು ಹೇಳಿದರು.

“ಭಗವಂತ ರಾಮ ನಿಮಗೆ ಗಲಭೆ ಮಾಡಲು ಹೇಳುವುದಿಲ್ಲ. ಆದರೆ ಈ ಜನರು (ಬಿಜೆಪಿ) ಗಲಭೆ ಮಾಡುತ್ತಾರೆ. ಹಾಗೆಯೇ ಗಲಭೆ ಸೃಷ್ಟಿಸಿ ಅವರು ರಾಜ್ಯಕ್ಕೆ ಎನ್‌ಐಎ ಕರೆಸಿಕೊಳ್ಳುತ್ತಾರೆ” ಎಂದು ಆರೋಪಿಸಿದರು.

Advertisements

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೇಲೆ ದಾಳಿ ನಡೆಸಲಾಗಿದ್ದು ಇದಾದ ಕೆಲವು ದಿನಗಳ ನಂತರ ಸಿಎಂ ಮಮತಾ ಬ್ಯಾನರ್ಜಿ ಈ ಹೇಳಿಕೆಯನ್ನು ನೀಡಿದ್ದಾರೆ. 2022 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನ ನಿವಾಸದಲ್ಲಿ ಸ್ಫೋಟ ನಡೆದಿರುವ ಬಗ್ಗೆ ತನಿಖೆ ನಡೆಸುತ್ತಿರುವಾಗ ಎನ್ಐಎ ಮೇಲೆ ದಾಳಿ ನಡೆದಿದೆ.

ಇದನ್ನು ಓದಿದ್ದೀರಾ?   ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

ಘಟನೆಯ ಬಗ್ಗೆ ಪ್ರಶ್ನಿಸಿದಾಗ “ಎನ್‌ಐಎ ಬಿಜೆಪಿಗೆ ಸಹಕಾರ ಮಾಡುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ಅವರು (ಎನ್‌ಐಎ) ಮಧ್ಯರಾತ್ರಿಯಲ್ಲಿ ಏಕೆ ದಾಳಿ ಮಾಡಿದರು? ಅವರಿಗೆ ಪೊಲೀಸ್ ಅನುಮತಿ ಇದೆಯೇ? ಮಧ್ಯರಾತ್ರಿಯಲ್ಲಿ ಬೇರೆ ಯಾರಾದರೂ ಅಪರಿಚಿತರು ಸ್ಥಳಕ್ಕೆ ಭೇಟಿ ನೀಡಿದರೆ ಸ್ಥಳೀಯರು ಪ್ರತಿಕ್ರಿಯಿಸುವ ರೀತಿ ಹೇಗಿರುತ್ತದೆಯೋ ಅದೇ ರೀತಿ ಸ್ಥಳೀಯರು ಪ್ರತಿಕ್ರಿಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆಗೂ ಮುನ್ನವೇ ಯಾಕೆ ಜನರನ್ನು ಬಂಧಿಸುತ್ತಿದ್ದಾರೆ? ಪ್ರತಿ ಬೂತ್ ಏಜೆಂಟರನ್ನು ಬಂಧಿಸುವ ಆಲೋಚನೆಯನ್ನು ಬಿಜೆಪಿ ಹೊಂದಿದೆಯೇ? ಎನ್ಐಎಗೆ ಯಾವ ಹಕ್ಕಿದೆ? ಬಿಜೆಪಿಯನ್ನು ಬೆಂಬಲಿಸಲು ಇದೆಲ್ಲವನ್ನೂ ಮಾಡುತ್ತಿದ್ದಾರೆ. ಬಿಜೆಪಿಯ ಈ ಕೊಳಕು ರಾಜಕಾರಣದ ವಿರುದ್ಧ ಇಡೀ ವಿಶ್ವವೇ ಹೋರಾಡುವಂತೆ ನಾವು ಕರೆ ನೀಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎನ್ಐಎ ತಂಡದ ಕಾರಿನ ಮೇಲೆ ಇಟ್ಟಿಗೆ ಎಸೆಯಲಾಗಿದೆ ಎಂದು ವರದಿಯಾಗಿದೆ. ಬೆಳಗಿನ ಜಾವ 5:30ರ ಸುಮಾರಿಗೆ ಅಕ್ಕಪಕ್ಕದ ನಿವಾಸಿಗಳು ಕಾರಿಗೆ ಕಲ್ಲೆಸೆದು ಘೇರಾವ್ ಹಾಕಿದ್ದಾರೆ ಎನ್ನಲಾಗಿದೆ. ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಎನ್‌ಐಎ ಅಧಿಕಾರಿಗಳ ಗುಂಪು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಈ ಬಗ್ಗೆ ಎನ್‌ಐಎ ಪೊಲೀಸ್ ದೂರು ದಾಖಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X