ಧಾರವಾಡ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಸ್ವತಂತ್ರ ಸ್ಪರ್ಧೆ ಘೋಷಿಸಿದ ದಿಂಗಾಲೇಶ್ವರ ಸ್ವಾಮೀಜಿ

Date:

Advertisements

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಧಿಕೃತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ರಾಜಕೀಯ ರಂಗವನ್ನು ಪ್ರವೇಶಿಸುತ್ತೇನೆ” ಎಂದು ಘೋಷಿಸಿದರು.

“ಅಧಿಕಾರದ ಮತ್ತು ಸಂಪತ್ತಿನ ಮದದಲ್ಲಿ ಪ್ರಲ್ಹಾದ್ ಜೋಶಿ ಬದುಕುತ್ತಿದ್ದಾರೆ. ಜೋಶಿಯವರ ಚೇಲಾಗಳು ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಜೋಷಿ ಅವರೇ, ನಿಮ್ಮ ಯಾವುದೇ ಕುತಂತ್ರ ನಮ್ಮ ಮುಂದೆ ನಡೆಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಪ್ರಲ್ಹಾದ್‌ ಜೋಶಿ ದುರಾಡಳಿತ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರು ಗಮನಹರಿಸುತ್ತಿಲ್ಲ. ಅವರಿಗೆ ಅದೇ ಬೇಕಾಗಿದೆ ಅನ್ನಿಸುತ್ತದೆ. ಹೀಗಾಗಿ, ಈ ದಿಂಗಾಲೇಶ್ವರ ರಾಜಕೀಯ ಪ್ರವೇಶ ಮಾಡಬೇಕಾಯಿತು. ಈ ಚುನಾವಣೆ ಎರಡು ರಾಷ್ಟ್ರೀಯ ಪಕ್ಷದ ವಿರುದ್ಧ ಸ್ವಾಭಿಮಾನದ ಯುದ್ಧ ಆಗಿದೆ. ಇದು ಮತದಾರರು ಮಾಡಿದ ತೀರ್ಮಾನ ಆಗಿದೆ. ಹೀಗಾಗಿ ನನಗೆ ಸ್ಪರ್ಧೆ ಮಾಡುವಂತೆ ಮತದಾರರು ಒತ್ತಾಯ ಮಾಡಿದ್ದಾರೆ” ಎಂದರು.

joshi a

“ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ಕಳೆದ ಒಂದೂವರೆ ವರ್ಷದಿಂದ ಹಾವೇರಿಯಲ್ಲಿ ಸಕ್ರಿಯರಾಗಿದ್ದರು. ಅವರಿಗೆ ಟಿಕೆಟ್‌ ತಪ್ಪಿಸಿರುವುದು ಇದೇ ಪ್ರಲ್ಹಾದ್‌ ಜೋಶಿ. ನಾನು ಹಿಂದೆಯೇ ಕೆಎಸ್‌ ಈಶ್ವರಪ್ಪ ಹಾಗೂ ಅವರ ಪುತ್ರನಿಗೆ ಪ್ರಹ್ಲಾದ್‌ ಜೋಶಿಯನ್ನು ನಂಬಬೇಡಿ ಎಂದು ಹೇಳಿದ್ದೆ. ಆದರೆ, ಅವರು ನನ್ನ ಮಾತು ಕೇಳಲಿಲ್ಲ” ಎಂದು ದಿಂಗಾಲೇಶ್ವರ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಲು ಮೂರನೇ ಅರ್ಜಿ: ಹೈಕೋರ್ಟ್‌ ಗರಂ

ದುರಾಡಳಿತದ ವಿರುದ್ಧ ನನ್ನ ಹೋರಾಟ ಎಂದ ದಿಂಗಾಲೇಶ್ವರ ಸ್ವಾಮೀಜಿ, “ಪ್ರಧಾನಿ ಮೋದಿ ಭೇಟಿಗೆ ಯಾವುದೇ ರಾಜ್ಯದ ಬಿಜೆಪಿ ಸಂಸದರು ಅವಕಾಶ ಕೊಡಲಿಲ್ಲ. ಪ್ರಲ್ಹಾದ್ ಜೋಷಿಯವರಿಗೆ ಮೋದಿಯವರು ದೂರ ಆಗುತ್ತಾರೆ ಅನ್ನುವ ಭಯವಿದೆ. ನನ್ನ ಗುರಿಯನ್ನು ಮುಟ್ಟುವವರೆಗೂ ಇನ್ಮುಂದೆ ಮಾಲೆಯನ್ನು ಧರಿಸಲ್ಲ. ಹೂಮಾಲೆಯನ್ನ ಸ್ವೀಕಾರ ಮಾಡುವುದಿಲ್ಲ” ಎಂದು ಇದೇ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಶಪಥ ಮಾಡಿದರು.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಬ್ರಾಹ್ಮಣ ಸಮಾಜದ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕುರುಬ ಸಮಾಜದ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಸುಮಾರು 6ರಿಂದ 7 ಲಕ್ಷ ಮತದಾರರು ಲಿಂಗಾಯತ ಸಮುದಾಯಕ್ಕೆ ಸೇರಿದವರಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X