ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿದ ಬಿಜೆಪಿ ಶಾಸಕ ರಾಜುಗೌಡ

Date:

Advertisements
  • ಕೊಡೇಕಲ್‌ ಬಸವಣ್ಣನ ಜಾತ್ರೆ ಉಲ್ಲೇಖಿಸಿದ ಶಾಸಕ
  • ಮುಸ್ಲಿಂ ಸೌಹಾರ್ದತೆ ಸಂದೇಶ ಸಾರಿದ ರಾಜುಗೌಡ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ ಅನೇಕ ಹೈಡ್ರಾಮಗಳಿಗೆ ಸಾಕ್ಷಿಯಾಗುತ್ತಿದೆ. ಸುರುಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರು ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿ ಅಲ್ಪಸಂಖ್ಯಾತರ ಮತಬೇಟೆಗೆ ಇಳಿದಿದ್ದಾರೆ.

ಸ್ವಗ್ರಾಮ ಕೊಡೇಕಲ್‌ನಲ್ಲಿ ರಾಜುಗೌಡ ಅವರು ಬಿಲಾಲ್ ಮಸೀದಿ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಹಿಂದೂ – ಮುಸ್ಲಿಂ ಸೌಹಾರ್ದತೆಗೆ ಸಂದೇಶ ಸಾರಿದ್ದಾರೆ. ಸದಾ ಮುಸ್ಲಿಮರ ವಿರುದ್ಧ ಕತ್ತಿ ಮಸೆಯುವ ಬಿಜೆಪಿ ನಾಯಕರು ಏಕಾಏಕಿ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ.

ಮಸೀದಿಯ ನಿರ್ಮಾಣದ ಭೂಮಿ ಪೂಜೆ ಬಳಿಕ ಮಾತನಾಡಿದ ರಾಜುಗೌಡ, “ನಾನು ಹಿಂದೂ ಆಗಿದ್ದರೂ ಮುಸ್ಲಿಮನಾಗಿ ಟೋಪಿ ಧರಿಸಿದ್ದೇನೆ. ಇವರು ಮುಸ್ಲಿಮರಾಗಿದ್ದರೂ ಹಿಂದೂವಾಗಿ ಕೇಸರಿ ಶಾಲು ಹಾಕಿಕೊಂಡಿದ್ದಾರೆ. ನಮ್ಮ ಬಳಿ ಯಾವುದೇ ಜಾತಿ-ಧರ್ಮ, ಭೇದ-ಭಾವ ಇಲ್ಲ. ನಮ್ಮ ಮುಂದಿನ ಪೀಳಿಗೆ ಇದೇ ಸಂಪ್ರದಾಯ ಮುಂದುವರಿಸಬೇಕು” ಎಂದಿದ್ದಾರೆ.

Advertisements

ಕೊಡೇಕಲ್ ಗ್ರಾಮದ ಬಸವಣ್ಣನವರ ಜಾತ್ರೆಯ ಕುರಿತು ಮಾತನಾಡಿದ ಅವರು, “ನಾವೆಲ್ಲಾ ಬಸವಣ್ಣನ ಮಕ್ಕಳು. ನಮ್ಮ ಹಿಂದಿನಿಂದಲೂ ನಾವೆಲ್ಲ ಒಟ್ಟಾಗಿ ಬದುಕುತ್ತಿದ್ದೇವೆ. ಮುಂದಿನ ತಲೆಮಾರು ಸಹ ಇದನ್ನೆ ಮುಂದುವರಿಸಲಿ. ಇನ್ನು ಸ್ವಲ್ಪ ದಿನಗಳಲ್ಲಿ ಬಸವಣ್ಣನ ಜಾತ್ರೆ ನಡೆಯುತ್ತದೆ. ಎಲ್ಲ ಸಮಾಜದವರು ಸೇರಿ ಇಲ್ಲಿ ಜಾತ್ರೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಲು ಯತ್ನಿಸುತ್ತಿರುವ ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X