ನಮ್ಮ ಮೆಟ್ರೋ | ಶರ್ಟ್‌ ಗುಂಡಿ ಇಲ್ಲದಕ್ಕೆ ಕಾರ್ಮಿಕನಿಗೆ ರೈಲು ಹತ್ತಲು ಬಿಡದ ಸಿಬ್ಬಂದಿ

Date:

Advertisements

ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರೋ ನಮ್ಮ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆಯಷ್ಟೇ ರೈತರೊಬ್ಬರು ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಅವರಿಗೆ ನಿಲ್ದಾಣದೊಳಗೆ ಪ್ರವೇಶ ನಿರ್ಬಂಧಿಸಿತ್ತು. ಇದೀಗ, ಅಂತಹದ್ದೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.

ಇದೀಗ, ಶರ್ಟ್‌ ಗುಂಡಿ ಹಾಕದ ಕಾರ್ಮಿಕನೊಬ್ಬನಿಗೆ ಮೆಟ್ರೋ ಒಳಗೆ ಪ್ರವೇಶವಿಲ್ಲ ಎಂದು ಹೇಳಿದ ಭದ್ರತಾ ಸಿಬ್ಬಂದಿ ಕಾರ್ಮಿಕನನ್ನು  ನಿಲ್ದಾಣದಲ್ಲಿಯೇ ನಿಲ್ಲಿಸಿದ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೆಟ್ರೋ ಸಿಬ್ಬಂದಿಯ ವರ್ತನೆಯಿಂದಾಗಿ ಯುವಕ ನಿಲ್ದಾಣದಲ್ಲಿಯೇ ಕಾಯುವಂತಾಗಿದೆ. ಯುವಕನ ಪರಿಸ್ಥಿತಿಯನ್ನು ಗಮನಿಸಿದ ಪ್ರಯಾಣಿಕರೊಬ್ಬರುದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಓಲ್ಡ್‌ ಸ್ಯಾಫರಾನ್ ಎಂಬ ಹೆಸರಿನ ಎಕ್ಸ್ಖಾತೆಯಿಂದ ಈ ವಿಡಿಯೋವನ್ನು ಫೊಸ್ಟ್‌ ಮಾಡಲಾಗಿದ್ದು, “ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಾಗರಿಕರ ಬಟ್ಟೆ/ಉಡುಗೆಗೆ ಸಂಬಂಧಿಸಿದ ಮತ್ತೊಂದು ಘಟನೆ ಇದೀಗ ನನ್ನ ಮುಂದೆ ನಡೆದಿದೆ. ಒಬ್ಬ ಕಾರ್ಮಿಕನ ಶರ್ಟ್‌ ಗುಂಡಿಗಳು ಇರದ ಕಾರಣ ಅವೆರಡು ಗುಂಡಿಗಳನ್ನು ಹೊಲಿದುಕೊಂಡು ಬಾ ಅಲ್ಲಿಯವರೆಗೂ ಮೆಟ್ರೋ ಹತ್ತಲು ಬಿಡುವುದಿಲ್ಲ ಎಂದು ಅವರನ್ನು ಭದ್ರತಾ ಸಿಬ್ಬಂದಿ ನಿಲ್ದಾಣದಲ್ಲಿಯೇ ನಿಲ್ಲಿಸಿದ್ದಾರೆ. ನಮ್ಮ ಮೆಟ್ರೋ ಯಾವಾಗಿನಿಂದ ಈ ರೀತಿ ಆಯಿತು” ಎಂದು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೋಟೆಲ್‌ನ 19ನೇ ಮಹಡಿಯಿಂದ ಹಾರಿ ತಮಿಳುನಾಡಿನ ವ್ಯಕ್ತಿ ಸಾವು

ಅಲ್ಲದೇ, ಈ ಪೋಸ್ಟ್‌ ಅನ್ನು ಬಿಎಂಆರ್‌ಸಿಎಲ್‌ ಹಾಗೂ ತೇಜಸ್ವಿ ಸೂರ್ಯ ಅವರಿಗೆ ಟ್ಯಾಗ್ ಮಾಡಲಾಗಿದೆ.

ಮೆಟ್ರೋ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರಿಯಾದ ಬಟ್ಟೆಯಿಲ್ಲದವರಿಗೆ, ರೈತರಿಗೆ, ಕಾರ್ಮಿಕರಿಗೆ ಇಲ್ಲದ ಮೆಟ್ರೋ ಕೇವಲ ಸಿರಿವಂತರಿಗೆ ಮಾತ್ರ ಸೀಮಿತವಾಗಿದೆಯೇ ಎಂದು ಪ್ರಶ್ನಿಸಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X