ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

Date:

Advertisements

ಸೋಮವಾರ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಮಂಗವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿರೇಂದರ್ ಸಿಂಗ್ ಜೊತೆ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕ ಪ್ರೇಮ್ ಲತಾ ಕೂಡ ಕಾಂಗ್ರೆಸ್ ಸೇರಿದ್ದಾರೆ.

ಬಿರೇಂದರ್ ಸಿಂಗ್ ಅವರ ಪುತ್ರ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದರು. ಅದಾದ ಬಳಿಕ ಬಿರೇಂದರ್ ಸಿಂಗ್ ಕೂಡಾ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಯಾಗಿತ್ತು.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಬಿರೇಂದರ್ ಸಿಂಗ್, “ನಾನು ಕಾಂಗ್ರೆಸ್ ಅನ್ನು ತೊರೆದಾಗ, ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧಾಂತಗಳಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ನಾನು ಭಾವಿಸಿದ್ದೆ. ಆದರೆ ಸಂಪೂರ್ಣವಾಗಿ ವ್ಯತಿರಿಕ್ತ ಸಿದ್ಧಾಂತವನ್ನು ಬಿಜೆಪಿ ಹೊಂದಿದೆ. ಇದು ನನ್ನ ‘ಘರ್ ವಾಪ್ಸಿ’ ಮಾತ್ರವಲ್ಲ, ‘ವಿಚಾರ ವಾಪ್ಸಿ’ ಕೂಡ ಆಗಿದೆ” ಎಂದು ಹೇಳಿದರು.

Advertisements


ಹಾಗೆಯೇ “ಈ ದೇಶವನ್ನು ‘ಜನ ಗಣ ಮನ’ ಮಾತ್ರ ಉಳಿಸಬಲ್ಲದು. ಕಾಂಗ್ರೆಸ್ ಭಾರತದಾದ್ಯಂತ ಇರುವ ಸರ್ವಪಕ್ಷವಾಗಿದೆ. ರಾಷ್ಟ್ರದ ಮೂಲಭೂತ ಅಂಶಗಳನ್ನು ರಕ್ಷಿಸುವುದು ಅದರ ಜವಾಬ್ದಾರಿಯಾಗಿದೆ” ಎಂದರು.

ಬಿರೇಂದರ್ ಸಿಂಗ್ ಅವರು ಸುಮಾರು 10 ವರ್ಷಗಳ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಅವರು 2014ರಲ್ಲಿ ಬಿಜೆಪಿ ಸೇರಿದ್ದು ಈಗ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ಸೇರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X