ಬಿಜೆಪಿ ಸೇರಿದ ತನ್ನ ಮಗನಿಗೆ ಚುನಾವಣೆಯಲ್ಲಿ ಸೋಲಾಗಲಿ ಎಂದ ಕಾಂಗ್ರೆಸ್ ಹಿರಿಯ ನಾಯಕ ಆಂಟನಿ

Date:

Advertisements

ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮ ಪುತ್ರ ಅನಿಲ್ ಆಂಟನಿ ಚುನಾವಣೆಯಲ್ಲಿ ಗೆಲ್ಲಬಾರದು, ಸೋಲಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟನಿ ಮಂಗಳವಾರ ಹೇಳಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಕೆ ಆಂಟನಿ, “ಚುನಾವಣೆಯಲ್ಲಿ ತಮ್ಮ ಮಗನ ಪಕ್ಷ ಸೋಲಬೇಕು ಮತ್ತು ದಕ್ಷಿಣ ಕೇರಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಂಟೊ ಆಂಟನಿ ಅವರನ್ನು ಜನರು ಗೆಲ್ಲಿಸಬೇಕು” ಎಂದು ಹೇಳಿದ್ದು, “ಕಾಂಗ್ರೆಸ್ ನಾಯಕರ ಮಕ್ಕಳು ಬಿಜೆಪಿ ಸೇರಿದ್ದು ತಪ್ಪು. ಕಾಂಗ್ರೆಸ್ ನನ್ನ ಧರ್ಮ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಪ್ರಶಾಂತ್ ಕಿಶೋರ್ ಚುನಾವಣಾ ಭವಿಷ್ಯ ‘ಹಾಸ್ಯಾಸ್ಪದ, ಬಿಜೆಪಿ ಪ್ರಾಯೋಜಿತ’ ಎಂದ ಕಾಂಗ್ರೆಸ್

Advertisements

ಕಳೆದ ವರ್ಷದ ಎಪ್ರಿಲ್‌ನಲ್ಲಿ, ಆಂಟನಿ ಅವರ ಪುತ್ರ ಅನಿಲ್, ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿಯ ಸಾಕ್ಷ್ಯಚಿತ್ರದ ಬಗ್ಗೆ ಕಾಂಗ್ರೆಸ್‌ನ ನಿಲುವನ್ನು ಟೀಕಿಸಿದ್ದು ನಂತರ ಬಿಜೆಪಿಗೆ ಸೇರಿದ್ದರು.

ಅನಿಲ್ ಆಂಟನಿ ಹೇಳಿದ್ದು ಹೀಗೆ

ತನ್ನ ತಂದೆಯ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅನಿಲ್ ಆಂಟನಿ, “ಕಾಂಗ್ರೆಸ್ ಹಳೆಯ ನಾಯಕರನ್ನು ಹೊಂದಿದೆ ಮತ್ತು ಇತ್ತೀಚೆಗೆ ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆಗಳನ್ನು ನೀಡಿ ವಿವಾದವನ್ನು ಹುಟ್ಟುಹಾಕಿದ್ದ ಹಾಲಿ ಸಂಸದ ಮತ್ತು ಕಾಂಗ್ರೆಸ್ ಸದಸ್ಯ ಆಂಟೋ ಆಂಟನಿಯನ್ನು ಬೆಂಬಲಿಸಿದ್ದಕ್ಕಾಗಿ ಮಾಜಿ ರಕ್ಷಣಾ ಸಚಿವರಾದ ತಮ್ಮ ತಂದೆಯ ಮೇಲೆ ಸಹಾನುಭೂತಿ ಹೊಂದಿದೆ” ಎಂದು ಟೀಕಿಸಿದರು. ಹಾಗೆಯೇ “ಪತ್ತನಂತಿಟ್ಟದಲ್ಲಿ ನಾನೇ ಗೆಲ್ಲುತ್ತೇನೆ” ಎಂದರು.

ಪತ್ತನಂತಿಟ್ಟ ಲೋಕಸಭಾ ಕ್ಷೇತ್ರ

ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತ್ರಿಪಕ್ಷೀಯ ಸ್ಪರ್ಧೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಬಿಜೆಪಿ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿಗೆ ಟಿಕೆಟ್ ನೀಡಿದರೆ, ಕ್ಷೇತ್ರದಲ್ಲಿ ಹಾಲಿ ಸಂಸದ ಆಂಟೋ ಆಂಟನಿಗೆ ಕಾಂಗ್ರೆಸ್ ಮತ್ತೆ ಟಿಕೆಟ್ ನೀಡಿದೆ. ಇನ್ನು ಸಿಪಿಐ-ಎಂನಿಂದ ಥಾಮಸ್ ಐಸಾಕ್ ಅವರನ್ನು ಕಣಕ್ಕಿಳಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

Download Eedina App Android / iOS

X