ರಾಜಿ ಮಾಡಿಕೊಂಡರೂ ಪೋಕ್ಸೋ ಪ್ರಕರಣ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

Date:

Advertisements

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧಗಳನ್ನು ಕೇವಲ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿ ಆಧಾರದ ಮೇಲೆ ರದ್ದುಗೊಳಿಸಲಾಗುವುದಿಲ್ಲ ಎಂದು ಹೇಳಿದೆ.

ಪೋಕ್ಸೋ ಕಾಯಿದೆಯಡಿ ಆರೋಪಿಯಾಗಿರುವ ಸಂಜೀವ್ ಕುಮಾರ್ ಎಂಬಾತ ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸಮಿತ್ ಗೋಪಾಲ್ ವಜಾಗೊಳಿಸಿದ್ದಾರೆ. “ಅಪರಾಧದಲ್ಲಿ ಸಂತ್ರಸ್ತೆಯ ಒಪ್ಪಿಗೆ ಇರಲಿಲ್ಲ. ಹೀಗಿರುವಾಗ, ರಾಜಿ ಕೂಡ ಇನ್ನೂ ಅಪ್ರಸ್ತುತವಾಗಿರುತ್ತದೆ. ಅಪ್ರಾಪ್ತ ಸಂತ್ರಸ್ತೆಯು ಅರ್ಜಿದಾರರೊಂದಿಗೆ (ಆರೋಪಿ) ರಾಜಿ ಮಾಡಿಕೊಳ್ಳಲು ಒಪ್ಪಿಕೊಂಡಿರುವುದು ಮಾತ್ರವೇ, ಪೋಕ್ಸೋ ಕಾಯಿದೆಯಡಿ ವಿಚಾರಣೆಯನ್ನು ರದ್ದುಗೊಳಿಸಲು ಸಾಕಾಗುವುದಿಲ್ಲ” ಎಂದು ಹೇಳಿದ್ದಾರೆ.

ಆರೋಪಿ ವಿರುದ್ಧ ಅಜಂಗಢ್ ಜಿಲ್ಲೆಯ ಬಿಲಾರಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 376 (ಅತ್ಯಾಚಾರ), 313 (ಮಹಿಳೆಯರ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುವುದು) ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್‌ 3/4  ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Advertisements

ಪೊಲೀಸರು ತನಿಖೆ ನಡೆಸಿ, ಜಾರ್ಜ್‌ಶೀಟ್‌ ಸಲ್ಲಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗೆ ಸಮನ್ಸ್‌ ನೀಡಲಾಗಿತ್ತು. ಈ ಬಳಿಕ, ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಆದರೂ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಉಳಿದಿದೆ. ಪ್ರಕರಣವನ್ನು ರದ್ದುಗೊಳಿಸಬೇಕೆಂದು ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿ ಮನವಿಯನ್ನು ವಿರೋಧಿಸಿದ ರಾಜ್ಯದ ವಕೀಲರು, “ಆರೋಪಿಯ ವಿರುದ್ಧದ ಆರೋಪಗಳು – ಮೂರು ವರ್ಷಗಳ ಅವಧಿಯಲ್ಲಿ ಬಾಲಕಿಯನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗಿಸಿವೆ. ಅಪರಾಧ ನಡೆದಾಗ ಸಂತ್ರಸ್ತೆಗೆ 15 ವರ್ಷ ವಯಸ್ಸಾಗಿತ್ತು. ಘಟನೆಗಳ ಸಮಯದಲ್ಲಿ ಸಂತ್ರಸ್ತೆ ಅಪ್ರಾಪ್ತ ವಯಸ್ಸಿನವನಾಗಿದ್ದರಿಂದ, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ತನಿಖೆ ವೇಳೆ ಆರೋಪಿ ವಿರುದ್ಧ ಪ್ರಾಥಮಿಕ ಅಪರಾಧ ಸಾಬೀತಾಗಿದೆ. ಹೀಗಾಗಿ, ವಿಚಾರಣಾ ನ್ಯಾಯಾಲಯವು ಅವನಿಗೆ ಸಮನ್ಸ್ ನೀಡಿತ್ತು. ಈ ರೀತಿಯ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಬೇಕು” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿದೆ. ಪೋಕ್ಸೋ ಪ್ರಕರಣಗಳಲ್ಲಿ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿಯ ಕಾರಣಕ್ಕೆ, ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X