ಗದಗ | ಬಿಸಿಲಿನ ತಾಪಕ್ಕೆ ಸಾಕುಪ್ರಾಣಿಗಳ ಸಾವು; ಪಶು ಆಸ್ಪತ್ರೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

Date:

Advertisements

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಳೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಗ್ರಾಮದ ರೈತರು ಗ್ರಾಮ ಪಂಚಾಯಿತಿ ಎದುರು ಸತ್ತ ಕುರಿಯನ್ನು ಇಟ್ಟು ಪ್ರತಿಭಟಿಸಿದರು.

“ಪಶು ಆರೋಗ್ಯ ಕೇಂದ್ರ ಇಲ್ಲದಿದ್ದರಿಂದ ಗ್ರಾಮಸ್ಥರು ಸರ್ಕಾರಕ್ಕೆ ಸಾವಿರಾರು ಬಾರಿ ಮನವಿ ಸಲ್ಲಿಸಿ ಸೋತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಸಿದ್ದಾರಾಮಯ್ಯ ಸರ್ಕಾರದ ಜನಸ್ಪಂದನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಬಾಳೆಹೊಸೂರು ಗ್ರಾಮ ಘಟಕದಿಂದ ಮನವಿ ಸಲ್ಲಿಸಲಾಗಿತ್ತು, ಘನ ಸರ್ಕಾರ ರಾಜ್ಯದ ಅನೇಕ ಗ್ರಾಮಗಳಿಗೆ ಮತ್ತು ತಾಲೂಕುಗಳಿಗೆ ಪಶು ಅಸ್ಪತ್ರೆ ಮಂಜೂರು ಮಾಡಿದ ಪಟ್ಟಿಯಲ್ಲಿ ಬಾಳೆಹೊಸೂರು ಗ್ರಾಮಕ್ಕೂ ಪಶು ಆಸ್ಪತ್ರೆ ಮಂಜುರಾಗಿದೆ” ಎಂದು ಪ್ರತಿಭಟನಾಕಾರರು ಹೇಳಿದರು.

“ಜಿಲ್ಲಾ ಮತ್ತು ತಾಲೂಕಿನ ಪಶು ವೈದ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಬಾಳೆಹೊಸೂರು ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ತಾತ್ಕಾಲಿಕ ಕಟ್ಟಡ ಶೋಧಿಸಬೇಕಾಗಿತ್ತು.  ಮೂಲಭೂತ ಸೌಕರ್ಯಗಳುಳ್ಳ ಒಂದು ಕಟ್ಟಡ ಒದಗಿಸಿಕೊಡಲು ಪಶು ಅಧಿಕಾರಗಳು ಪಂಚಾಯಿತಿ ಆಡಳಿತಾಧಿಕಾರಿಗಳಿಗೂ ವಿನಂತಿಸಿದ್ದಾರೆ. ಆದರೆ ಬಾಳೆಹೊಸೂರು ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಮತ್ತು ಸದಸ್ಯರು ಈಯವರೆಗೆ ಸ್ಪಂದಿಸಿಲ್ಲ” ಎಂದು ಆರೋಪಿಸಿದರು.

Advertisements

“ಕುರಿ ದನ-ಕರಗಳು ಅಡವಿ-ಅರಣ್ಯದಲ್ಲಿ ಕಿಲೋ ಮೀಟರ್ ದೂರದವರೆಗೂ ಮೇಯಲು ಹೋದ ಜಾನುವಾರುಗಳು ಬೇಸಿಗೆಯ ಬಿಸಿಲಿನ ಜಳಕ್ಕೆ ತತ್ತರಿಸಿ ಅಲ್ಲಲ್ಲೇ ಸಾಯುತ್ತಿವೆ. ಮನೆಗಳಲ್ಲಿರುವಾಗಲೇ ಪ್ರಾಣಿಗಳನ್ನು ಆಸ್ಪತ್ರೆಗೆ ಸೇರಿಸಬೇಕೆಂದರೆ ಹತ್ತಿರದಲ್ಲಿ ಆಸ್ಪತ್ರೆಗಳಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಿಸಿಲಿನ ಜಳಕ್ಕೆ ಕೋಳಿಗಳ ಸಾವು; ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ

ಕುರಿಗಳ ಮಾಲೀಕ ಕೃಷ್ಣಪ್ಪ ಜಾಲವಾಡಗಿ, ಗ್ರಾಮ ಘಟಕ ರೈತ ಸಂಘ ಅದ್ಯಕ್ಷ ಲೋಕೇಶ ಜಾಲವಡಗಿ, ಉಪಾಧ್ಯಕ್ಷ ನಿಂಗಪ್ಪ ಸೋಮಪ್ಪ ಗುಡ್ಡಣ್ಣವರ, ಬಸವರಡ್ಡಿ ಹನಮರಡ್ಡಿ, ಮಂಜುನಾಥ ಗುಡಗೇರಿ, ಮಂಜುನಾಥ ಕಬ್ಬೇರ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X