ಮಣಿಪುರ ಹಿಂಚಾಸಾರ| ನಿರಾಶ್ರಿತ ಕೇಂದ್ರಗಳಲ್ಲಿ 180ಕ್ಕೂ ಹೆಚ್ಚು ಶಿಶುಗಳ ಜನನ

Date:

Advertisements

ಮಣಿಪುರ ಹಿಂಚಾಸಾರದ ಬಳಿಕ ಮನೆ ಕಳೆದುಕೊಂಡವರು ನಿರಾಶ್ರಿತ ಕೇಂದ್ರದಲ್ಲಿದ್ದು ಈ ನಿರಾಶ್ರಿತ ಕೇಂದ್ರದಲ್ಲಿಯೇ ಈವರೆಗೆ 180ಕ್ಕೂ ಹೆಚ್ಚು ಶಿಶುಗಳ ಜನನವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

11 ತಿಂಗಳ ಘರ್ಷಣೆ, ಹಿಂಸಾಚಾರ ಮತ್ತು ಮುಂದುವರಿದ ಅನಿಶ್ಚಿತತೆಯ ನಡುವೆಯೂ ರಾಜ್ಯದಾದ್ಯಂತ ವಿವಿಧ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಕುಕಿ ಬುಡಕಟ್ಟಿನ ಹಟ್ನ್ಯೂ ಅವರಂತಹ ಸುಮಾರು 200 ಅಧಿಕ ಸ್ಥಳಾಂತರಗೊಂಡ ಮಹಿಳೆಯರು ತಮ್ಮ ನವಜಾತ ಶಿಶುಗಳನ್ನು ಸ್ವಾಗತಿಸಿದ್ದಾರೆ.

“ನಾನು ನನ್ನ ಅವಳಿಗಳನ್ನು ನನ್ನ ತೋಳುಗಳಲ್ಲಿ ಹಿಡಿದಾಗ, ನನ್ನ ಎಲ್ಲಾ ದುಃಖಗಳು ಕರಗಿ ಹೋದವು. ಈಗ ನನ್ನ ಈ ಅವಳಿ ಗಂಡು ಮಕ್ಕಳಿಗೆ ನಾಲ್ಕು ತಿಂಗಳು. ಅವರು ದೊಡ್ಡವರಾದ ಬಳಿಕ ನಾನು ಅವರ ಹುಟ್ಟಿನ ಕಥೆ ಹೇಳುತ್ತೇನೆ” ಎಂದು ಕಾಕ್ಚಿಂಗ್ ಜಿಲ್ಲೆಯ ಪರಿಹಾರ ಶಿಬಿರದಲ್ಲಿ 26 ವರ್ಷದ ಮಹಿಳೆಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?   ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ: ಮಣಿಪುರದ ಜನರ ಧ್ವನಿ

“ಗರ್ಭಧಾರಣೆಯ ಅವಧಿಯಲ್ಲಿ ಅಧಿಕ ಕಾಳಜಿ ವಹಿಸುವುದು ಅಗತ್ಯ. ಯಾವುದೇ ಭಾರವನ್ನು ಎತ್ತಬೇಡಿ, ಒತ್ತಡಕ್ಕೆ ಒಳಗಾಗಬೇಡಿ, ಚೆನ್ನಾಗಿ ತಿನ್ನಿ ಎಂದು ಈ ಅವಧಿಯಲ್ಲಿ ಹೇಳಲಾಗುತ್ತದೆ. ಆದರೆ ನನಗೆ ಈ ಅವಧಿಯು ಬದುಕುಳಿಯುವ ಅವಧಿಯಾಗಿತ್ತು” ಎಂದು ಮಣಿಪುರ ಹಿಂಸಾಚಾರವನ್ನು ನೆನಪಿಸಿಕೊಂಡಿದ್ದಾರೆ.

ಘರ್ಷಣೆ ಆರಂಭವಾದಾಗ ಕುಕಿ-ಜೋ ಮಹಿಳೆ ಲು ಲಾಮ್ವಾ ನ್ಗಾಹ್ಜೆಮ್ಕಿಮ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಈಗ ಚುರಾಚಂದ್‌ಪುರದ ಪರಿಹಾರ ಶಿಬಿರದಲ್ಲಿ ನೆಲೆಸಿದ್ದಾರೆ. ಈಗ ಲು ಲಾಮ್ವಾ ತನ್ನ ಮಗಳು ಕ್ರಿಸ್ಟಿಗೆ ಜನ್ಮ ನೀಡಿದ್ದು ಹಿಂಸಾಚಾರದ ಬಗ್ಗೆ ಪಿಟಿಐ ಜೊತೆ ಮಾತನಾಡಿದ್ದಾರೆ. “ಘರ್ಷಣೆಗಳು ಪ್ರಾರಂಭವಾದಾಗ ನಾವು ಮನೆಯಲ್ಲಿ ಊಟ ಮಾಡುತ್ತಿದ್ದೆವು. ಘರ್ಷಣೆ ಆರಂಭವಾಗುತ್ತಿದ್ದಂತೆ ನಾವು ಹತ್ತಿರದ ಬೆಟ್ಟಗಳಲ್ಲಿ ಅಡಗಿಕೊಂಡೆವು. ರಕ್ಷಣಾ ಪಡೆಗಳು ನಮ್ಮನ್ನು ರಕ್ಷಿಸುವವರೆಗೆ ನಾವು ಹಲವಾರು ಗಂಟೆಗಳ ಕಾಲ ಆ ಬೆಟ್ಟದಲ್ಲೇ ಅಡಗಿದ್ದೆವು. ನಮ್ಮ ಮನೆ ಕೆಲವೇ ನಿಮಿಷಗಳಲ್ಲಿ ಇಲ್ಲವಾಯಿತು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಮಣಿಪುರ ಹಿಂಸಾಚಾರ| ಸ್ಥಳಾಂತರಗೊಂಡ 24,000 ಕ್ಕೂ ಹೆಚ್ಚು ನಾಗರಿಕರಿಗೆ ಪರಿಹಾರ ಶಿಬಿರದಲ್ಲೇ ಮತದಾನಕ್ಕೆ ಅವಕಾಶ

ಮಣಿಪುರದಲ್ಲಿ ಕಳೆದ ವರ್ಷ (2023) ಮೇ 3 ರಿಂದ ಬಹುಸಂಖ್ಯಾತ ಮೈತಿ ಸಮುದಾಯ ಮತ್ತು ಕುಕಿಗಳ ನಡುವೆ ಹಿಂಸಾಚಾರ ನಡೆಯುತ್ತಿದ್ದು, ಈ ಜನಾಂಗೀಯ ಘರ್ಷಣೆಯಿಂದಾಗಿ ಈವರೆಗೂ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮೈತಿ ಸಮುದಾಯದವರು ಇಂಫಾಲ್ ನಗರದಲ್ಲಿ ನೆಲೆಸಿದರೆ, ಕುಕಿಗಳು ಬೆಟ್ಟಗಳಿಗೆ ಸ್ಥಳಾಂತರಗೊಂಡಿದ್ದಾರೆ. 50,000 ಕ್ಕೂ ಹೆಚ್ಚು ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X