ರಾಯಚೂರು | ರಸ್ತೆ ನಿರ್ಮಾಣದ ಹೆಸರಲ್ಲಿ ಅಕ್ರಮವಾಗಿ ಭೂಸ್ವಾಧೀನ: ಚಾಮರಾಜ ಮಾಲಿಪಾಟೀಲ್ ಆರೋಪ

Date:

Advertisements

ರಾಯಚೂರು ಗಿಣಗೇರಾ ಹೆದ್ದಾರಿ ರಸ್ತೆ ನಿರ್ಮಾಣದ ಹೆಸರಿನಲ್ಲಿ ರೈತರಿಗೆ ಮಾಹಿತಿ ನೀಡದೆ ಭೂ-ಸ್ವಾಧೀನ ಪ್ರಕ್ರಿಯೆ ನಡೆಸದೇ ಅಕ್ರಮವಾಗಿ ಒತ್ತುವರಿ ಮಾಡುತ್ತಿರುವ ವಿರುದ್ಧ ಸಂಘಟಿತ ಹೋರಾಟ ನಡೆಸಲು ನೀರಮಾನವಿ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಕಲ್ಯಾಣಮಂಟಪದಲ್ಲಿ ಏಪ್ರಿಲ್‌ 13ರಂದು ಭೂ ಸಂತ್ರಸ್ಥರ ರೈತರ ಸಮಾಲೋಚನಾ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “90 ಕಿಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ₹1600 ಕೋಟಿ ವೆಚ್ಚ ಕಾಮಗಾರಿ ಪ್ರಾರಂಭಿಸಲಾಗಿದೆ. ಸಾಥ್ ಮೈಲ್ ಕ್ರಾಸ್‌ನಿಂದ ಸಿಂಧನೂರುವರೆಗೆ ಹೋಗುವ ರಸ್ತೆಯ ಇಕ್ಕೆಲ್ಲಗಳಲ್ಲಿ 75 ಅಡಿ ಭೂಮಿಯನ್ನು ಪಡೆಯಲಾಗುತ್ತಿದೆ. ರೈತರಿಗೆ ಪರಿಹಾರ ನೀಡದೆ ಭೂಮಿ ಪಡೆಯತ್ತಿರುವುದು ರೈತರಿಗೆ ಮಾಡುತ್ತಿರುವ ದ್ರೋಹವಾಗಿದೆ” ಎಂದು ಆರೋಪಿಸಿದರು.

“1990ರಿಂದ ರಸ್ತೆಗೆ ಯಾವುದೇ ಭೂಮಿ ಸ್ವಾಧೀನಪಡಿಸಿಕೊಂಡಿಲ್ಲವೆಂದು ಲೋಕೊಪಯೋಗಿ ಇಲಾಖೆ ದಾಖಲೆ ನೀಡಿದೆ. ಹೆದ್ದಾರಿ ಕಾಮಗಾರಿಯನ್ನು ಕೆಶಿಪ್ ಮೂಲಕ ನಿರ್ವಹಿಸಲಾಗುತ್ತಿದೆ. ರೈತರಿಗೆ ಯಾವುದೇ ರೀತಿ ಮಾಹಿತಿ ಇಲ್ಲದೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. 2002ರ ಏಪ್ರಿಲ್‌ನಲ್ಲಿ 75 ಅಡಿ ಭೂಮಿ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಳ್ಳುವುದಾಗಿ ಹೇಳಲಾಗಿತ್ತು. ಅಲ್ಲಿಂದ ಈವರೆಗೆ ಯಾವುದೇ ಕಾಮಗಾರಿ ನಡೆಸಿಲ್ಲ. ಈಗ ಏಕಾಏಕಿ ಎರಡು ಇಕ್ಕೆಲಗಳಿಗೆ ನೂರು ಅಡಿ ಜಾಗ ಪಡೆಯಲಾಗುತ್ತಿರುವುದಾಗಿ ಹೇಳಲಾಗುತ್ತಿದೆ” ಎಂದರು.

Advertisements

“ಜಿಲ್ಲಾಧಿಕಾರಿಯವರು ಕೂಡಲೇ ಮಧ್ಯಪ್ರವೇಶಿಸಿ ರೈತರ ಸಮಸ್ಯೆ ಬಗೆಹರಿಸಬೇಕು. ಚುನಾಯಿತ ಜನಪ್ರತಿನಿಧಿಗಳು ನೀತಿ ಸಂಹಿತೆ ನೆಪ ಹೇಳದೆ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಹಂತ ಹಂತವಾಗಿ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮತದಾನ ಜಾಗೃತಿ ಮೂಡಿಸಲು ವಿಕಲಚೇತನರ ಬೈಕ್ ರ್‍ಯಾಲಿ

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾ, ಬೂದೆಯ್ಯಸ್ವಾಮಿ, ಶರಣಬಸವ ಬೆಟ್ಟದೂರು, ದೇವರಾಜನಾಯಕ, ಭೀಮಣ್ಣ ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X