ಶಿವಮೊಗ್ಗ | ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

Date:

Advertisements

ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದ 14 ನೇ ವಾರ್ಡಿನಲ್ಲಿ ಬುಧವಾರ (ಏ.10) ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗೀತಾ ಅವರ ರಕ್ತದಲ್ಲಿಯೇ ಸಮಾಜ ಸೇವೆಯ ಗುಣ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಸಾಮಾಜಿಕ ಮೌಲ್ಯಗಳನ್ನು ಗೀತಾಗೆ ವರವಾಗಿ ನೀಡಿ ಹೋಗಿದ್ದಾರೆ. ಇದು ರಾಜಕೀಯ ಪ್ರವೇಶಕ್ಕೆ ಪ್ರೇರಣೆ ನೀಡಿದೆ ಎಂದರು‌.

Advertisements

ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂದೆ ಇದ್ದಾರೆ. ಗೀತಾಗೆ ಒಂದು ಅವಕಾಶ ಕೊಡಿ ನಾನು ಅವರಿಂದ ಕೆಲಸ ಮಾಡಿಸುತ್ತೇನೆ‌ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಶಿವಮೊಗ್ಗ ಜನರ ಸೇವೆ ಮಾಡಲು ಸಿಕ್ಕ ಅವಕಾಶವಿದು. ಕೇವಲ ಚುನಾವಣೆಯಲ್ಲಿ ಮತಗಳಿಕೆಯ ರಾಜಕೀಯಕ್ಕೆ ಸ್ವಾರ್ಥದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿಲ್ಲ. ಇಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ದುರಾಡಳಿತದಿಂದ ಜನ ಸಾಮಾನ್ಯರನ್ನು ಮುಕ್ತಗೊಳಿಸಲು ಈ ಯೋಜನೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಜನರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನೂ ಕೂಡ ಸಾಗಬೇಕು ಎಂದು ಕನಸು ಕಂಡಿದ್ದೇನೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷದವರು ಕಳೆದ 15 ವರ್ಷಗಳಿಂದ ಸುಳ್ಳು ಹೇಳಿಕೊಂಡು, ಜನ ಸಾಮಾನ್ಯರಿಗೆ ಪೊಳ್ಳು ಭರವಸೆ ನೀಡುತ್ತ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ, ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್ ಮಾತನಾಡಿ, ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದು ಓದು ಆರಂಭಿಸಿದ ವಿದ್ಯಾರ್ಥಿಯೊರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿ ಮಾಧ್ಯಮಗಳ ಎದುರು, ತಂದೆಯನ್ನು ಕಳೆದುಕೊಂಡಿರುವ ನನಗೆ ಮತ್ತು ನನ್ನ ತಾಯಿಗೆ ಗೃಹಲಕ್ಷ್ಮಿ ಯೋಜನೆ ನೆರವು ನೀಡಿದೆ ಎಂದು ತಿಳಿಸಿದ್ದಾನೆ‌. ಇದರಿಂದ, ಗ್ಯಾರಂಟಿ ಯೋಜನೆಗಳು ಬಡ ಮಕ್ಕಳ ಓದಿಗೆ ಸಹಕಾರಿ ಆಗಿದೆ ಎನ್ನುವುದನ್ನು ಜನ ಸಾಮಾನ್ಯರು ಅರ್ಥೈಸಿಕೊಳ್ಳಬೇಕು ಎಂದರು.

ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ಕಲೀಂ ಪಾಶ, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ ಸೇರಿ ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X