ಸಿ ಟಿ ರವಿಗೆ ಅನ್ಯಾಯವಾಗಿದೆ, ಅವರಿಗೆ ಒಳ್ಳೆಯ ಅವಕಾಶ ಸಿಗುತ್ತೆ: ಯಡಿಯೂರಪ್ಪ

Date:

Advertisements

ನಮ್ಮ ಸಿ ಟಿ ರವಿ ಅವರಿಗೆ ಅನ್ಯಾಯ ಆಗಿರುವುದನ್ನು ಒಪ್ಪಿಕೊಳ್ಳುವೆ. ಬರುವ ದಿನಗಳಲ್ಲಿ ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಿ, ಅನ್ಯಾಯ ಸರಿಪಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.

ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಗುರುವಾರ ಮತನಾಡಿದ ಅವರು, “ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಈಗ ಹೊರಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಅವಕಾಶ ಸಿಗಲೇಬೇಕು” ಎಂದರು.

ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಮುಖಂಡ ಸಿ ಟಿ ರವಿ, “ನಮ್ಮ ನಾಯಕರ ಹೆಸರನ್ನೇ ಹೇಳಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಅಪಪ್ರಚಾರ ನಡೆಯಿತು. ಇದರಿಂದ ನಾನು ಸೋಲಬೇಕಾಯಿತು” ಎಂದು ತಿಳಿಸಿದರು.

Advertisements

“ಮಾದರಸನ ಕೆರೆ, ದಾಸರಹಳ್ಳಿ ಕೆರೆ ತುಂಬಿಸಿದಾಗ ಮತ್ತೆ ಮತ ಕೇಳಲು ಬರುವುದು ಬೇಡ, ನಾವೇ ಮತ ಹಾಕುತ್ತೇವೆ ಎಂದು ಜನ ಹೇಳಿದ್ದರು. ಚುನಾವಣೆ ಸಂದರ್ಭದಲ್ಲಿ ಕೆಲಸದ ಚರ್ಚೆ ಆಗದೇ, ನನ್ನ ವಿರುದ್ಧ ಅಪಪ್ರಚಾರ ನಡೆಯಿತು. ಜೆಡಿಎಸ್‌ನವರೂ ಅವರಿಗೇ ಬೆಂಬಲ ನೀಡಿದರು” ಎಂದರು.

“ಕಾಂಗ್ರೆಸ್‌ಗೆ ಮತ ಹಾಕಿ ಗೂಟ ಹೊಡೆಸಿಕೊಳ್ಳಬೇಕಾಯಿತು. ದುಡಿಯುವ ಎತ್ತಿಗೆ ಮೇವು ಹಾಕಬೇಕು ಎಂಬುದನ್ನು ಜನ ಯೋಚನೆ ಮಾಡಬೇಕಿತ್ತು. ಮುಂದೆ ಗೂಟ ಹೊಡೆಸಿಕೊಳ್ಳಬಾರದು ಎಂದಾದರೆ ಬಿಜೆಪಿಗೆ ಮತ ಹಾಕಿ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X