ರೈತರ ಕನಿಷ್ಠ ಬೆಂಬಲ ಬೆಲೆ, ಯುವಕರ ಉದ್ಯೋಗದ ಬಗ್ಗೆ ಕೇಳಿಸಿಕೊಳ್ಳದ ಕೇಂದ್ರ: ರಾಹುಲ್ ಗಾಂಧಿ

Date:

Advertisements

ರೈತರು ಕನಿಷ್ಠ ಬೆಂಬಲ ಬೆಲೆ, ಯುವಕರು ಉದ್ಯೋಗ ನೀಡಿಕೆ, ಮಹಿಳೆಯರು ಹಣದುಬ್ಬರದಿಂದ ನಿವಾರಣೆ ಬಗ್ಗೆ ಕೇಂದ್ರವನ್ನು ಕೇಳುತ್ತಿದ್ದರೂ ಸರ್ಕಾರ ಮಾತ್ರ ಕೇಳಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ರಾಜಸ್ಥಾನದ ಬಿಕನೇರ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ. ಈ ಚುನಾವಣೆಯು ಹಿಂದುಳಿದ ವರ್ಗ, ದಲಿತರು, ಬುಡಕಟ್ಟು ವರ್ಗ ಹಾಗೂ ಸಾಮಾನ್ಯ ವರ್ಗದ ಬಡಜನರ ಚುನಾವಣೆಯಾಗಿದೆ ಎಂದು ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೊಡ್ಡ ಉದ್ಯಮಿಗಳಿಂದ ಚುನಾವಣಾ ಬಾಂಡ್ ಮೂಲಕ ಹಣ ತೆಗೆದುಕೊಂಡಿದೆ. ನಮ್ಮ ಪಕ್ಷದ ಬ್ಯಾಂಕ್ ಅಕೌಂಟ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯು ದೇಶದ ಬಡ ಜನರು ಹಾಗೂ 22-25 ಉದ್ಯಮಿಗಳ ನಡುವೆ ನಡೆಯುವ ಚುನಾವಣೆಯಾಗಿದೆ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಪ್ರಸ್ತುತ ದೇಶದ ಅತೀ ದೊಡ್ಡ ಸಮಸ್ಯೆಗಳೆಂದರೆ ನಿರುದ್ಯೋಗ ಹಾಗೂ ಹಣದುಬ್ಬರ. ಆದರೆ ಈ ಸಮಸ್ಯೆಗಳನ್ನು ಮಾಧ್ಯಮಗಳಲ್ಲಿ ತೋರಿಸಲಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು.

ಪಕ್ಷದ ಚುನಾವಣಾ ಪ್ರಣಾಳಿಕೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೀಘ್ರದಲ್ಲೇ ನೀಡಿದ ಭರವಸೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ 15-20 ಉದ್ಯಮಿಗಳ ಸಾಲ ಮನ್ನ ಮಾಡಲಾಗಿದೆ. ಇದೇ ಹಣವನ್ನು ಮನ್‌ರೇಗಾ ಯೋಜನೆಯ ಕೂಲಿಗಾಗಿ 24 ವರ್ಷಗಳವರೆಗೂ ಖರ್ಚು ಮಾಡಬಹುದಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತದ ಇತಿಹಾಸದಲ್ಲಿಯೇ ನಮ್ಮ ದೇಶದ ರೈತರು ತೆರೆಗೆಯನ್ನು ಪಾವತಿಸುತ್ತಿರುವುದು ಇದೇ ಮೊದಲು ಎಂದು ಎಂದು ಕೇಂದ್ರ ಸರ್ಕಾರದ ರೈತ ವಿರೋಧ ನೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X