‘ಅನ್ನಭಾಗ್ಯ’ ಮೋದಿ ಅವರದ್ದು, ‘ಕನ್ನಭಾಗ್ಯ’ ಸಿದ್ದರಾಮಯ್ಯರದ್ದು: ಆರ್‌ ಅಶೋಕ್‌ ಕಿಡಿ

Date:

Advertisements

ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಈಗ ಕಾಂಗ್ರೆಸ್‌ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್‌ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು ಚುನಾವಣಾ ಸಂಬಂಧದ ಸಭೆ ಹಾಗೂ ಬಂಗಾರಪೇಟೆ ಕ್ಷೇತ್ರದ ಅಂಚಾಳ ಗ್ರಾಮದಲ್ಲಿ ನಡೆದ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು.

“ನರೇಂದ್ರ ಮೋದಿ ಪ್ರಧಾನಿಯಾದ ನಂತರ ಡಾ.ಬಿ.ಆರ್‌.ಅಂಬೇಡ್ಕರ್‌ ಬರೆದ ಸಂವಿಧಾನಕ್ಕೆ ಹೆಚ್ಚು ಮಹತ್ವ ನೀಡಿದ್ದಾರೆ. ಅಂಬೇಡ್ಕರ್‌ ಅವರು ತುಳಿತಕ್ಕೊಳಗಾದ ಜನರ ಪರವಾಗಿ ದನಿ ಎತ್ತಿದ್ದರು. ಅಂತಹ ಮಹಾನ್‌ ವ್ಯಕ್ತಿ ಬಾಬಾ ಸಾಹೇಬ್‌ ಅಂಬೇಡ್ಕರರು ಲೋಕಸಭೆಗೆ ಹೋಗಲು ಚುನಾವಣೆಗೆ ನಿಂತಾಗ ಅವರನ್ನು ಕಾಂಗ್ರೆಸ್‌ ಹೀನಾಯವಾಗಿ ಸೋಲಿಸಿತ್ತು. ಅಂದಿನ ಪ್ರಧಾನಿ ನೆಹರೂ ಅಂಬೇಡ್ಕರರನ್ನು ಸೋಲಿಸುವ ಕರೆ ನೀಡಿದ್ದರು” ಎಂದರು.

Advertisements

“ಅಂಬೇಡ್ಕರರು ತೀರಿಕೊಂಡಾಗ ಸ್ಮಾರಕ ನಿರ್ಮಿಸಲು ಕೂಡ ಕಾಂಗ್ರೆಸ್‌ ಜಾಗ ಕೊಡಲಿಲ್ಲ. ಇಷ್ಟೆಲ್ಲ ಅನ್ಯಾಯ ಮಾಡಿದ ಕಾಂಗ್ರೆಸ್‌ಗೆ ದಲಿತರು ಮತ ನೀಡಬೇಕೆ? ಎಂದು ಆಲೋಚಿಸಬೇಕು. ಪ್ರಧಾನಿ ಮೋದಿ ಅಂಬೇಡ್ಕರ್‌ ಐದು ಸ್ಥಳಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಹಾಗಾಗಿ ಅವರಿಗೆ ದಲಿತರು ಮತ ನೀಡಬೇಕು” ಎಂದು ವಿನಂತಿಸಿದರು.

“ಪಾಕಿಸ್ತಾನ ಅನೇಕ ಬಾರಿ ದೇಶದ ಮೇಲೆ ದಾಳಿ ಮಾಡಿದೆ. ಇತ್ತೀಚೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್‌ನವರೇ ಕರೆದುಕೊಂಡು ಬಂದವರು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಇಂತಹವರಿಗೆ ಶಿಕ್ಷೆ ನೀಡದೆ ಕಾಂಗ್ರೆಸ್‌ ಸರ್ಕಾರ ಸುಮ್ಮನಿದೆ. ಸಿಎಂ ಸಿದ್ದರಾಮಯ್ಯನವರು ಆಗಾಗ್ಗೆ ಅನ್ನಭಾಗ್ಯ ಎಂದು ಹೇಳುತ್ತಾರೆ. ಆದರೆ ಅದು ನಿಜವಾಗಿಯೂ ಮೋದಿ ಭಾಗ್ಯವಾಗಿದೆ. ಇವರದ್ದು ಕನ್ನ ಭಾಗ್ಯ” ಎಂದು ಟೀಕಿಸಿದರು.

“ಬರ ಪರಿಹಾರವನ್ನು ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ಕೈ ತೋರಿಸುತ್ತಾರೆ. ಈ ಚುನಾವಣೆ ಮುಗಿದ ನಂತರ ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿರುವುದಿಲ್ಲ” ಎಂದರು.

ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು ಅವರ ತಂದೆ ಐಎಎಸ್‌ ಅಧಿಕಾರಿಯಾಗಿ ದಲಿತರಿಗೆ ಸಹಾಯ ಮಾಡಿದ್ದಾರೆ. ವಿದ್ಯಾವಂತ ಯುವಕ ಮಲ್ಲೇಶ್‌ ಅವರಿಗೆ ಎಲ್ಲರೂ ಬೆಂಬಲಿಸಬೇಕು. ಹಿಂದಿನ ಸಂಸದ ಮುನಿಸ್ವಾಮಿ ಅವರ ಹೆಸರನ್ನು ಹಿಂದೆ ನಾನೇ ಶಿಫಾರಸು ಮಾಡಿದ್ದೆ. ಆಗಲೂ ಎಲ್ಲರೂ ಅಪಾರ ಬೆಂಬಲ ನೀಡಿದ್ದರು. ಈಗಲೂ ಅದೇ ರೀತಿ ಬೆಂಬಲ ನೀಡಬೇಕು” ಎಂದು ಕೋರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X