ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

Date:

Advertisements

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ಸದ್ಯ ವಶಕ್ಕೆ ಪಡೆದಿರುವ ಇಬ್ಬರು ಶಂಕಿತರನ್ನು ಎನ್​ಐಎ ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಶಂಕಿತರನ್ನು ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ವಿಚಾರಣೆಗೆ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದೆ.

ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜೀಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.

Advertisements

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಗಳಾದ ಶಾಜೀಬ್ ಮತ್ತು ತಾಹಾ ಅವರನ್ನು ಕಳೆದ ವಾರ ಪ್ರಮುಖ ಆರೋಪಿಗಳೆಂದು ಎನ್‌ಐಎ ಗುರುತು ಮಾಡಿತ್ತು. ಅವರನ್ನು ಬಂಧಿಸಲು ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿತ್ತು. ಅಲ್ಲದೇ, 1000ಕ್ಕೂ ಹೆಚ್ಚು ಸಿಸಿಟಿವಿಗಳ ಪರಿಶೀಲನೆ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಸೈಬರ್‌ ವಂಚನೆ | ₹2.24 ಕೋಟಿ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಂಕಿತರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಟೋಟ ನಡೆದಿತ್ತು. ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟಿದ್ದ ವ್ಯಕ್ತಿಯ ಪತ್ತೆಗೆ ನಿರಂತರ ಶೋಧ ಕಾರ್ಯ ನಡೆಸಲಾಗಿತ್ತು. ಬಳಿಕ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X