ಹಾಸನ | ಬಾಡೂಟ ವಶಕ್ಕೆ ಪಡೆದು ರಸ್ತೆಗೆ ಬಿಸಾಡಿದ ಎಫ್‌ಎಸ್‌ಟಿ ತಂಡ: ಚೆಲ್ಲಿದ ಊಟವನ್ನೇ ತಿಂದ ಜನರು

Date:

Advertisements

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು ವಶಕ್ಕೆ ಪಡೆದುಕೊಂಡಿದೆ. ಆದರೆ, ವಶಕ್ಕೆ ಪಡೆದ ಆಹಾರವನ್ನ ರಸ್ತೆಗೆ ಚೆಲ್ಲಿದೆ. ರಸ್ತೆಗೆ ಚೆಲ್ಲಿದ್ದ ಆಹಾರವನ್ನೇ ಕೆಲವರು ತಿಂದ ಘಟನೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಕೋಡಿಹಳ್ಳಿ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ಆಗಮಿಸುತ್ತಿದ್ದರು. ಇವರು ಬರುವ ಹಿನ್ನೆಲೆ, ಪ್ರಚಾರ ಸಭೆಗೆ ಬರುವ ಜನರಿಗಾಗಿ ಕಾಂಗ್ರೆಸ್‌ ಮುಖಂಡರು ಭರ್ಜರಿ ಬಾಡೂಟ ಮಾಡಿಸಿದ್ದರು. ಈ ವಿಚಾರ ತಿಳಿದ ಎಫ್‍ಎಸ್‍ಟಿ ತಂಡ ಗ್ರಾಮಕ್ಕೆ ಭೇಟಿ ನೀಡಿ ದಾಳಿ ನಡೆಸಿದೆ.

ಅಲ್ಲದೇ, ಪರಿಶೀಲನೆ ನಡೆಸಿದಾಗ ಬಾಡೂಟ ವ್ಯವಸ್ಥೆ ಮಾಡಿರುವುದು ಬೆಳಕಿಗೆ ಬಂದಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬಾಡೂಟ ವಶಕ್ಕೆ ಪಡೆದುಕೊಂಡು ನಂತರ ಬಾಡೂಟವನ್ನು ರಸ್ತೆಗೆ ಸುರಿದು ನಾಶಪಡಿಸಿದೆ.

Advertisements

ಬಳಿಕ ಘಟನೆ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಗ್ರಾಮದ ಓರ್ವ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

ಹುಟ್ಟುಹಬ್ಬದ ಅಂಗವಾಗಿ ನಾನ್‍ವೆಜ್ ಊಟ ಮಾಡಿಸಲಾಗಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದು, ವೀಡಿಯೋ ಮಾಡಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಫ್ಲೈಯಿಂಗ್ ಸ್ಕ್ವಾಡ್ ಬಾಡೂಟ ವಶಕ್ಕೆ ಪಡೆದು ಬಳಿಕ ರಸ್ತೆಯ ಬದಿ ಚೆಲ್ಲಿ ಹೋಗಿದ್ದರು. ಆದರೆ, ನಾನ್‌ವೆಜ್ ಚೆಲ್ಲಿದ ಸ್ಥಳಕ್ಕೆ ಹೋಗಿರುವ ಗ್ರಾಮಸ್ಥರು ರಸ್ತೆಗೆ ಚೆಲ್ಲಿದ ಬಾಡೂಟವನ್ನೇ ತಟ್ಟೆಗೆ ಹಾಕಿಕೊಂಡು ತಿಂದಿದ್ದಾರೆ. ಇನ್ನೂ ಕೆಲವರು ನೇರವಾಗಿ ಅಲ್ಲಿಯೇ ನೆಲದ ಮೇಲೆ ಬಿದ್ದ ಅನ್ನ ಬಾಡೂಟ ಸವಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X