ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್…!

Date:

Advertisements
  • ಬಿಜೆಪಿ ಅಭ್ಯರ್ಥಿ ವಿರುದ್ದ ಗುಟುರು ಹಾಕಿದ ಗೂಳಿಹಟ್ಟಿ ಶೇಖರ್
  • ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಬೆಂಬಲಿಸಲ್ಲ ಎಂದ ಮಾಜಿ ಸಚಿವ

ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊಸದುರ್ಗ ಕ್ಷೇತ್ರ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿರುವ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಈಗ ಕಮಲ ಪಕ್ಷಕ್ಕೆ ಮತ್ತೊಂದು ಶಾಕ್ ನೀಡಿದಾರೆ.

ಕ್ಷೇತ್ರದಲ್ಲೇನಾದರೂ ನನಗೆ ಕಠಿಣ ಸ್ಥಿತಿ ಬಂದರೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಹೇಳುತ್ತೇನೆ ಎಂದು ಹೇಳಿದ್ದಾರೆ. ಈ ಹೇಳಿಕೆ ಈಗ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಗುರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಗೂಳಿಹಟ್ಟಿ ಶೇಖರ್, ಇದುವರೆಗೆ ಯಾವುದೇ ಬಿಜೆಪಿ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ.

Advertisements

ಈ ಸುದ್ದಿ ಓದಿದ್ದೀರಾ?:ಚುನಾವಣೆ 2023 | ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ

ಮುಂದೆಯೂ ಅವರ ಓಲೈಕೆಗೆ ಬಗ್ಗುವುದಿಲ್ಲ, ನಾನು ಸ್ಪರ್ಧಿಸುವುದು ಶತಸಿದ್ದ, ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಮೂರ್ತಿಯನ್ನು ನಾನು ಬೆಂಬಲಿಸುವುದಿಲ್ಲ ಎಂದರು.

ಅಂತಹ ಕಠಿಣ ಸ್ಥಿತಿ ಬಂದರೇ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಹೇಳುತ್ತೇನೆ ಎಂದ ಗೂಳಿಹಟ್ಟಿ ಶೇಖರ್, ನನಗೆ ಇವರೆಲ್ಲರೂ ಸಹಿಸದಷ್ಟು ಕಾಟ ಕೊಟ್ಟಿದ್ದಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X