ಗಣಿ ಬಾಧಿತ ಜನರ ಜೀವನ ಸುಧಾರಣೆಗೆ ಇರುವ ಹಣದ ದುರ್ಬಳಕೆಗೆ ಯತ್ನ; ಎಸ್‌.ಆರ್ ಹಿರೇಮಠ್ ಆರೋಪ

Date:

Advertisements

ಗಣಿಗಾರಿಕೆಯಿಂದ ತೊಂದರೆಗೆ ಸಿಲುಕಿದ ಜನರ ಜೀವನ ಮಟ್ಟದ ಸುಧಾರಣೆಗಾಗಿ ಮೀಸಲಿರುವ 25,000 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡುವ ಯತ್ನ ನಡೆಯುತ್ತಿದೆ ಎಂದು ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್‌) ಮುಖ್ಯಸ್ಥ ಎಸ್‌.ಆರ್‌ ಹಿರೇಮಠ ಆರೋಪಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಗಣಿಗಾರಿಕೆಯಿಂದ ಜೀವನ ಕಳೆದುಕೊಂಡ ಜನರಿಗಾಗಿ ಅಕ್ರಮ ಗಣಿಗಾರಿಕೆ ನಡೆಸಿದ ಕಂಪನಿಗಳಿಂದ ಕರ್ನಾಟಕ ಗಣಿಗಾರಿಕೆ ಪರಿಸರ ಮರುಸ್ಥಾಪನೆ ನಿಗಮ (ಕೆಎಂಇಆರ್‌ಸಿ) ಸಂಗ್ರಹಿಸಿರುವ 25 ಸಾವಿರ ಕೋಟಿ ರೂ.ಅನ್ನು ಲೂಟಿ ಹೊಡೆಯಲು ರಾಜ್ಯ ಸರ್ಕಾರದ ಮಟ್ಟದಲ್ಲೇ ಪ್ರಯತ್ನ ನಡೆಯುತ್ತಿದೆ. ಐಎಎಸ್‌ ಅಧಿಕಾರಿಗಳೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿದ್ದರು. ಇದಕ್ಕೆ, ಅವಕಾಶ ನೀಡಬಾರದು” ಎಂದು ಹೇಳಿದ್ದಾರೆ.

“ಅಧಿಕಾರಿಗಳು ರೂಪಿಸಿದ್ದ ಸಂಚಿಗೆ ಸರ್ಕಾರವೂ ಬೆಂಬಲ ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ರಚಿಸಿದ್ದ ನ್ಯಾಯಮೂರ್ತಿ ಬಿ ಸುದರ್ಶನ ರೆಡ್ಡಿ ನೇತೃತ್ವದ ಉನ್ನತಾಧಿಕಾರ ಪ್ರಾಧಿಕಾರವು ಆ ಸಂಚನ್ನು ವಿಫಲಗೊಸಿದೆ. ಆದರೆ, ಮುಂದೆ ಮತ್ತೆ ಇಂತಹ ಸಂಚುಗಳು ನಡೆಯುವ ಸಾಧ್ಯತೆಗಳಿದ್ದು, ನಿರಂತರ ಹೋರಾಟ ನಡೆಸಬೇಕಿದೆ” ಎಂದು ಹೇಳಿದ್ದಾರೆ.

Advertisements

“ಗಣಿ ಬಾಧಿತ ಪ್ರದೇಶಗಳಲ್ಲಿ ಯಾವ ರೀತಿಯ ಜನ ಕಲ್ಯಾಣ ಕಾರ್ಯಕ್ರಮ ರೂಪಿಸಬೇಕೆಂದು ಸುಪ್ರೀಂ ಕೋರ್ಟ್‌ ತನ್ನ 2024ರ ಮಾರ್ಚ್‌ 14ರ ತೀರ್ಪಿನಲ್ಲಿ ಹೇಳಿದೆ. ಕೆಎಂಇಆರ್‌ಸಿ ನಿಧಿಯನ್ನು ಆ ಉದ್ದೇಶಗಳಿಗೆ ಮಾತ್ರ ಬಳಸಬೇಕು. ಈ ನಿಧಿಯು ಗಣಿಬಾಧಿಕ ಪ್ರದೇಶಗಳ ಜನರ ಭವಿಷ್ಯಕ್ಕೆ ಸಂಬಂಧಿಸಿದ್ದು, ಒಂದೊಂದು ಪೈಸೆಗೂ ಲೆಕ್ಕ ನೀಡಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X