ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

Date:

Advertisements

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ ತಂಡವು ಗೆದ್ದು ಬೀಗಿದೆ.

ಲಕ್ನೋ ನೀಡಿದ್ದ ಸಾಧಾರಣ ಮೊತ್ತದ ಗುರಿಯನ್ನು ಬೆನ್ನತ್ತಿದ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡ 18.1 ಓವರ್​ನಲ್ಲಿ 4 ವಿಕೆಟ್​ ನಷ್ಟಕ್ಕೆ 170 ರನ್​ ಗಳಿಸುವ ಮೂಲಕ ಗೆಲುವು ಸಾಧಿಸಿದೆ.

ಡೆಲ್ಲಿ ಪರ ಆರಂಭಿಕ ಆಟಗಾರನಾಗಿ ಬಂದ ಪೃಥ್ವಿ ಶಾ ಕೇವಲ 22 ಎಸೆತದಲ್ಲಿ 6 ಬೌಂಡರಿಯ ನೆರವಿನಿಂದ 32 ರನ್​ ಸಿಡಿಸಿದರು. ಜಾಕ್ ಫ್ರೇಸರ್ ತಾನು ಆಡಿದ ಮೊದಲ ಐಪಿಎಲ್ ಪಂದ್ಯದಲ್ಲೇ 35 ಎಸೆತದಲ್ಲಿ 5 ಸಿಕ್ಸರ್​, 2 ಬೌಂಡರಿಯ ನೆರವಿ​ನೊಂದಿಗೆ 55 ರನ್​ ಗಳಿಸುವ ಮೂಲಕ ಮೊದಲ ಅರ್ಧಶತಕ ದಾಖಲಿಸಿ ಮಿಂಚಿದರು.

Advertisements

ಡೆಲ್ಲಿಯ ನಾಯಕ ರಿಷಭ್​​​​ ಪಂತ್​​ 24 ಎಸೆತದಲ್ಲಿ 2 ಸಿಕ್ಸರ್​, 4 ಬೌಂಡರಿಯ ನೆರವಿ​ನೊಂದಿಗೆ 41 ರನ್​ ಗಳಿಸುವ ಮೂಲಕ ಮಿಂಚಿದರು. ಕೊನೆಯಲ್ಲಿ ಸ್ಟಬ್ಸ್​​ 15, ಶಾಯ್ ಹೋಪ್​ 11 ರನ್​ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಬೌಲಿಂಗ್‌ನಲ್ಲಿ ಲಕ್ನೋ ಪರ ರವಿ ಬಿಷ್ನೋಯ್ 2 ವಿಕೆಟ್ ಪಡೆದರೆ, ಯಶ್ ಠಾಕೂರ್ ಹಾಗೂ ನವೀನುಲ್ ಹಕ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಯುಷ್ ಬದೊನಿ ಅವರ ಏಕೈಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು.

ಲಕ್ನೋ ತಂಡದ ಪರ ಡಿಕಾಕ್​​ 19 ಮತ್ತು ಕ್ಯಾಪ್ಟನ್​ ಕೆ.ಎಲ್​ ರಾಹುಲ್​ 22 ಎಸೆತದಲ್ಲಿ 1 ಸಿಕ್ಸರ್​, 5 ಬೌಂಡರಿ​ ಸಮೇತ 39 ರನ್​ ಗಳಿಸಿದರು. ಬಳಿಕ ಆಯುಷ್ ಬದೊನಿ 35 ಎಸೆತದಲ್ಲಿ 1 ಸಿಕ್ಸರ್​​, 5 ಬೌಂಡರಿಯ ನೆರವಿನೊಂದಿಗೆ 55 ರನ್​ ಗಳಿಸಿದರು.

ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕುಲ್‌ದೀಪ್ ಯಾದವ್ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಖಲೀಲ್ ಅಹ್ಮದ್ 4 ಓವರ್‌ಗಳಲ್ಲಿ 41 ರನ್ ನೀಡಿ 2 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮತ್ತು ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದಿದ್ದರು.

ಪಂದ್ಯಶ್ರೇಷ್ಠ ಪ್ರಶಸ್ತಿ: ಕುಲ್‌ದೀಪ್ ಯಾದವ್(ಡೆಲ್ಲಿ ಕ್ಯಾಪಿಟಲ್ಸ್)

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X