ಕಚೇರಿಯಿಂದ ಅಂಬೇಡ್ಕರ್‌, ವಾಲ್ಮೀಕಿ ಫೋಟೊ ತೆಗೆದ ಆರೋಪ: ಪ್ರಲ್ಹಾದ ಜೋಶಿ ವಿರುದ್ಧ ಕಾಂಗ್ರೆಸ್ ಆಕ್ರೋಶ

Date:

Advertisements

ಕೇಂದ್ರ ಸಚಿವ ಹಾಗೂ ಧಾರವಾಡ ಕೇತ್ರದ ಲೋಕಸಭಾ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಫೋಟೊಗಳನ್ನು ತೆಗೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಧಾರವಾಡ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಈಗಾಗಲೇ ಲಿಂಗಾಯತರ ವಿರೋಧ ಕಟ್ಟಿಕೊಂಡಿದ್ದು ಈಗ ಕಚೇರಿಯಿಂದ ಅಂಬೇಡ್ಕರ್‌ ಮತ್ತು ವಾಲ್ಮಿಕಿ ಫೋಟೊ ತೆಗೆಸುವ ಮೂಲಕ ದಲಿತ ಮತ್ತು ನಾಯಕ ಸಮುದಾಯಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಿಂದ ಅಂಬೇಡ್ಕರ್‌ ಮತ್ತು ವಾಲ್ಮಿಕಿ ಫೋಟೊ ತೆಗೆಸುವ ವಿಡಿಯೋ ಒಂದನ್ನು ಸುದ್ದಿ ಸಂಸ್ಥೆಯೊಂದು ಪ್ರಸಾರ ಮಾಡಿದ್ದು ಈ ಸುದ್ದಿಯನ್ನು ಎಕ್ಸ್‌ನಲ್ಲಿ (ಟ್ವಿಟ್ಟರ್‌) ಕಾಂಗ್ರೆಸ್ ಪೋಸ್ಟ್ ಮಾಡಿದೆ.

Advertisements


“ಬಿಜೆಪಿ & ಆರೆಸ್ಸೆಸ್‌ಗೆ ಅಂಬೇಡ್ಕರ್ ಕಂಡರೆ ಕೋಪ, ಬಸವಣ್ಣನ ಕಂಡರೆ ದ್ವೇಷ, ವಾಲ್ಮೀಕಿಯನ್ನು ಕಂಡರೆ ಅಸಹನೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ?  ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ: ಪ್ರಲ್ಹಾದ ಜೋಶಿ ಕಿಡಿ

“ಸಂಘಪರಿವಾರದ ಮುದ್ದಿನ ಕೂಸಾದ ಪ್ರಲ್ಹಾದ ಜೋಶಿ ಅವರು ತಮ್ಮೊಳಗಿನ ಲಿಂಗಾಯತ, ದಲಿತ, ಹಿಂದುಳಿದ ವರ್ಗಗಳ ಮೇಲಿನ ದ್ವೇಷವನ್ನು ಮಹನೀಯರ ಫೋಟೊವನ್ನು ಹೊರಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್ ದೂರಿದೆ.

“ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಅಡಿಯಲ್ಲೇ ಚುನಾವಣೆ ನಿಂತಿದ್ದರೂ ಅಂಬೇಡ್ಕರ್ ಅವರನ್ನು ಆಚೆ ಎಸೆಯುವ ಸಂಘದ ಮನಸ್ಥಿತಿಯನ್ನು ನಾಡಿನ ಜನತೆ ಸಹಿಸುವುದಿಲ್ಲ. ಬಿಜೆಪಿ ಹಾಗೂ ಜೋಷಿಯ ದುರಹಂಕಾರ ಪರಮಾವಧಿಗೆ ತಲುಪಿದೆ, ಜನತೆ ಬಿಜೆಪಿಯನ್ನು ಹೆಸರಿಲ್ಲದಂತೆ ನಿರ್ನಾಮ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಹೇಳಿದೆ.

ಈ ಸುದ್ದಿಯ ಕುರಿತು ಬಿಜೆಪಿ ಅಥವಾ ಪ್ರಲ್ಹಾದ ಜೋಶಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X