ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ರವಿನಾಥ ಸುನಿಲಾಲ್ ಪತ್ತಾರ (52), ಅರ್ಜುನ್ ಕುಶಾಲ್ ಸಿಂಗ್ ರಜಪೂತ (32), ಪುಷ್ಪಾ (40) ಹಾಗೂ ಮೇಘರಾಜ್ ರಜಪೂತ(12) ಮೃತ ದುರ್ದೈವಿಗಳು.
ಶನಿವಾರ ಬೆಳಿಗ್ಗೆ ವಿಜಯಪುರದಿಂದ ಜಮಖಂಡಿಗೆ ಅರ್ಜುನ್ ಸಿಂಗ್ ತಮ್ಮ ಪೋಷಕರು ಹಾಗೂ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಜಮಖಂಡಿಯಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಮೂರು ದಿನ ಎನ್ಐಎ ಟ್ರಾನ್ಸಿಟ್ ರಿಮ್ಯಾಂಡ್ಗೆ ಪ್ರಮುಖ ಆರೋಪಿಗಳು
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.