ಲೋಕಸಭೆ ಚುನಾವಣೆ| ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರಿಗೆ ಗಾಯ

Date:

Advertisements

ಸುಮಾರು ಒಂದು ತಿಂಗಳುಗಳ ಕಾಲ ಯಾವುದೇ ಹಿಂಸಾಚಾರ ವರದಿಯಾಗದ ಮಣಿಪುರದಲ್ಲಿ ಈಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶುಕ್ರವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ಹೊಸ ಗುಂಡಿನ ಚಕಮಕಿ ನಡೆದಿದ್ದು ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಹೈರೋಕ್ ಪೊಲೀಸ್ ಠಾಣೆಯಿಂದ ಪೂರ್ವಕ್ಕೆ 30 ಕಿಮೀ ದೂರದಲ್ಲಿರುವ ತೆಂಗ್ನೌಪಾಲ್ ಮತ್ತು ಕಾಕ್ಚಿಂಗ್ ಜಿಲ್ಲೆಗಳ ಪಕ್ಕದ ಪ್ರದೇಶಗಳಲ್ಲಿ ಈ ಘಟನೆ ನಡೆದಿದೆ. ಚುನಾವಣಾ ಅಧಿಕಾರಿಗಳು ಮಣಿಪುರದಲ್ಲಿ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ನಡುವೆ ಮತ್ತೆ ಹಿಂಸಾಚಾರ ಹೆಚ್ಚಾಗುವ ಸಾಧ್ಯತೆಯಿದೆ.

ತೆಂಗ್ನೌಪಾಲ್ ಜಿಲ್ಲೆಯು ಝೋ-ಕುಕಿ ಸಮುದಾಯವನ್ನು ಒಳಗೊಂಡಂತೆ ಬುಡಕಟ್ಟು ಸಮುದಾಯದ ಜನಸಂಖ್ಯೆಯನ್ನು ಹೊಂದಿದ್ದು, ಕಾಕ್ಚಿಂಗ್ ಜಿಲ್ಲೆ ಮೈತಿಗಳ ಪ್ರಾಬಲ್ಯವಿರುವ ಕಣಿವೆಯಲ್ಲಿದೆ.

Advertisements

ಬೆಳಗಿನ ಜಾವ 1 ಗಂಟೆಯ ಸುಮಾರಿಗೆ, ಬೆಟ್ಟಗಳಿಂದ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕಣಿವೆ ಪ್ರದೇಶದ ಕಡೆಗೆ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಗ್ರಾಮದ ಸ್ವಯಂಸೇವಕರು ಪ್ರತಿದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ?  ಮಣಿಪುರ ಹಿಂಚಾಸಾರ| ನಿರಾಶ್ರಿತ ಕೇಂದ್ರಗಳಲ್ಲಿ 180ಕ್ಕೂ ಹೆಚ್ಚು ಶಿಶುಗಳ ಜನನ

ಬೆಳಿಗ್ಗೆ 8 ಗಂಟೆಯವರೆಗೆ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮದ ಸ್ವಯಂಸೇವಕ, ಹೈರೋಕ್ ಭಾಗ-2 ಲೈಮಾಯುಮ್ ನಿವಾಸಿ ರಾಜೀವ್ ಅವರ ಪುತ್ರ ನಿಂಗ್ಥೌಜಮ್ ಜೇಮ್ಸ್ (24) ಗಾಯಗೊಂಡಿದ್ದಾರೆ. ಅವರನ್ನು ಇಂಫಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡಿನ ಚಕಮಕಿಯ ಬಗ್ಗೆ ಮಾಹಿತಿ ಪಡೆದ ನಂತರ, ರಾಜ್ಯ ಪಡೆಗಳ ತಂಡವು ಪಲ್ಲೆಲ್‌ನಿಂದ ಅಸ್ಸಾಂ ರೈಫಲ್ಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.

ಮಧ್ಯಾಹ್ನ 2.30 ರ ಸುಮಾರಿಗೆ, ಬೆಟ್ಟಗಳು ಮತ್ತು ಕಣಿವೆಯಿಂದ ಎರಡು ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ದಾಳಿ ಮತ್ತೆ ನಡೆದಿದೆ. ಇದರಿಂದಾಗಿ ಕಣಿವೆಯ ಮತ್ತೊಬ್ಬ ಗ್ರಾಮ ಸ್ವಯಂಸೇವಕನಿಗೆ ಗಾಯವಾಗಿದೆ. ಗಾಯಾಳು ಗುರುತು ಇನ್ನೂ ತಿಳಿದುಬಂದಿಲ್ಲ, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿರುವುದರಿಂದ, ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ಕಳುಹಿಸಲಾಗಿದೆ.

ಇದನ್ನು ಓದಿದ್ದೀರಾ?  ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ: ಮಣಿಪುರದ ಜನರ ಧ್ವನಿ

ಇನ್ನು ಫೆಬ್ರವರಿ ಅಂತ್ಯದಲ್ಲಿ, ಇಂಫಾಲ್ ಪೂರ್ವ ಜಿಲ್ಲಾ ಪೊಲೀಸ್‌ನ ಹೆಚ್ಚುವರಿ ಎಸ್‌ಪಿ ಅವರ ವಾಂಗ್‌ಖೇ ನಿವಾಸದ ಮೇಲೆ ಸಶಸ್ತ್ರ ಗುಂಪುಗಳು ದಾಳಿ ನಡೆಸಿದ್ದವು.

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, ಈವರೆಗೂ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ತಮ್ಮ ಮನೆಗಳನ್ನು ಕಳೆದುಕೊಂಡ 50000ಕ್ಕೂ ಅಧಿಕ ಜನರು ನಿರಾಶ್ರಿತ ಕೇಂದ್ರದಲ್ಲಿ ಸದ್ಯ ವಾಸವಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X