ಮುಂಗಡ ಟಿಕೆಟ್‌ ಬುಕ್ಕಿಂಗ್‌ನಲ್ಲೇ ಮುಗ್ಗರಿಸಿದ ಸಲ್ಮಾನ್‌ ಖಾನ್‌ ಸಿನಿಮಾ

Date:

Advertisements

ಜಗತ್ತಿನಾದ್ಯಂತ 5,700 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರ

ಮೂರು ದಿನ ಕಳೆದರೂ 50 ಸಾವಿರದ ಗಡಿ ದಾಟದ ಮುಂಗಡ ಟಿಕೆಟ್‌ ಬುಕ್ಕಿಂಗ್‌

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಅಭಿನಯದ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಟ್ರೈಲರ್‌ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಜಗತ್ತಿನಾದ್ಯಂತ 5,700ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ಎಂದು ಖ್ಯಾತ ಸಿನಿಮಾ ವಿಶ್ಲೇಷಕ ತರಣ್‌ ಆದರ್ಶ್‌ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ, ನಿರೀಕ್ಷಿತ ಮಟ್ಟಕ್ಕೆ ಚಿತ್ರದ ಮುಂಗಡ ಟಿಕೆಟ್‌ಗಳು ಮಾರಾಟವಾಗಿಲ್ಲ ಎನ್ನಲಾಗುತ್ತಿದೆ.

Advertisements

ಈ ಬಗ್ಗೆ ಟ್ವಿಟರ್‌ನಲ್ಲಿ ವಿಶೇಷ ಪೋಸ್ಟರ್‌ ಹಂಚಿಕೊಂಡು ಮಾಹಿತಿ ನೀಡಿರುವ ತರಣ್‌ ಆದರ್ಶ್‌,” ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ, ಈದ್‌ ಮಿಲಾದ್‌ ಏಪ್ರಿಲ್‌ 21ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ದೇಶಾದ್ಯಂತ 4,500 ಚಿತ್ರಮಂದಿರಗಳನ್ನು ಕಾಯ್ದಿರಿಸಲಾಗಿದ್ದು, 16 ಸಾವಿರ ಪರದೆಗಳಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ. ಆಸ್ಟ್ರೇಲಿಯಾ, ಅಮೆರಿಕಾ, ಲಂಡನ್‌ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ 1,200ಕ್ಕೂ ಅಧಿಕ ಚಿತ್ರಮಂದಿಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಏಪ್ರಿಲ್‌ 18ರಂದೇ ಚಿತ್ರದ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆ ಆರಂಭಗೊಂಡಿದ್ದು, ಈವರೆಗೆ ದೇಶಾದ್ಯಂತ 50 ಸಾವಿರ ಟಿಕೆಟ್‌ಗಳು ಮಾತ್ರ ಬಿಕರಿಯಾಗಿವೆ ಎಂದು ವರದಿಯಾಗಿದೆ. ಇತ್ತೀಚೆಗೆ ತೆರೆಕಂಡಿದ್ದ ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಬರೆದಿತ್ತು. ಚಿತ್ರ ಬಿಡುಗಡೆಯಾಗುವ ಮೊದಲೇ 5 ಲಕ್ಷ 56 ಸಾವಿರ ಟಿಕೆಟ್‌ಗಳು ಮಾರಾಟವಾಗಿದ್ದವು. ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಚಿತ್ರ ಕೂಡ ಮುಂಗಡ ಬುಕ್ಕಿಂಗ್‌ನಲ್ಲಿ ಇದೇ ಮಾದರಿಯ ದಾಖಲೆ ನಿರ್ಮಿಸಲಿದೆ ಎಂದು ನಿರೀಕ್ಷಿಸಲಾಗಿತ್ತು.

ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಚಿತ್ರ ಪ್ರೇಮ ಕಥೆ ಮತ್ತು ಕೌಟುಂಬಿಕ ಕಥಾಹಂದರದ ಸುತ್ತ ಮೂಡಿ ಬಂದಿದೆ. ವೈರಿಗಳಿಂದ ನಾಯಕಿಯ ಕುಟುಂಬವನ್ನು ರಕ್ಷಿಸಲು ಹೋರಾಡುವ ಆ್ಯಕ್ಷನ್ ಹೀರೋ ಪಾತ್ರದಲ್ಲಿ ಸಲ್ಮಾನ್‌ ಖಾನ್‌ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿನ ಬಹುತೇಕ ಕಲಾವಿದರು ದಕ್ಷಿಣ ಸಿನಿರಂಗದವರು ಎಂಬುದು ಗಮನಾರ್ಹ. ಕನ್ನಡತಿ ಪೂಜಾ ಹೆಗ್ಡೆ ನಾಯಕಿಯ ಪಾತ್ರದಲ್ಲಿ ಮಿಂಚಿದ್ದು, ವಿಕ್ಟರಿ ವೆಂಕಟೇಶ್‌, ಜಗಪತಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಫರ್ಹಾದ್‌ ಸಮ್ಜಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಸಲ್ಮಾನ್‌ ಖಾನ್‌ ಅವರ ತಾಯಿ ಸಲ್ಮಾ ಖಾನ್‌ ಬಂಡವಾಳ ಹೂಡಿದ್ದಾರೆ. ಕನ್ನಡಿಗ, ‘ಕೆಜಿಎಫ್‌’ ಖ್ಯಾತಿಯ ರವಿ ಬಸ್ರೂರ್‌ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X