ಜಮ್ಮು| ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್ ಜೊತೆ ವಿಲೀನ

Date:

Advertisements

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತ ಸಂಘಟನೆ ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಮ್ (ಎಐಕೆಎಚ್‌ಎಫ್) ಶನಿವಾರ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರು ಎಐಕೆಎಚ್‌ಎಫ್ ಅಧ್ಯಕ್ಷ ರತ್ತನ್ ಲಾಲ್ ಭಾನ್ ಮತ್ತು ಇತರ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವಿಕಾರ್ ರಸೂಲ್ ವಾನಿ, “ಎಐಕೆಎಚ್‌ಎಫ್ ಅನ್ನು 1998ರಲ್ಲಿ ಸ್ಥಾಪಿಸಲಾಗಿದ್ದು ಅದರ ನೂರಾರು ಸದಸ್ಯರು ಕಾಂಗ್ರೆಸ್‌ಗೆ ಸೇರುವುದು ಪಕ್ಷಕ್ಕೆ ದೊಡ್ಡ ಉತ್ತೇಜನವಾಗಿದೆ” ಎಂದು ತಿಳಿಸಿದರು.

Advertisements

ಇದನ್ನು ಓದಿದ್ದೀರಾ?   ಲೋಕಸಭೆ ಚುನಾವಣೆ | ಜಮ್ಮುವಿನಲ್ಲಿ ಕಾಂಗ್ರೆಸ್‌ಗೆ ಶಿವಸೇನೆ ಸಾಥ್

ಎಲ್ಲಾ ಕಾಶ್ಮೀರಿ ಪಂಡಿತರ ಸಂಘಟನೆಗಳನ್ನು ಪಕ್ಷಕ್ಕೆ ಸೇರುವಂತೆ ಕರೆ ನೀಡಿದ ಅವರು, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಿಂದ ಸಮುದಾಯವನ್ನು ಮುರ್ಖರನ್ನಾಗಿಸಿದೆ” ಎಂದು ಆರೋಪಿಸಿದರು.

“ಬಿಜೆಪಿ ಅಧಿಕಾರಕ್ಕೆ ಬರಲು ದೇಶಾದ್ಯಂತ ಹಲವಾರು ಸಂಸ್ಥೆಗಳನ್ನು ಮಾರಾಟ ಮಾಡಿದೆ. ಕಾಶ್ಮೀರಿ ಪಂಡಿತರಿಗೆ ಹಲವಾರು ಭರವಸೆಗಳನ್ನು ನೀಡಿದೆ. ಕಳೆದ 10 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದರೂ ಅವರು 10 ಪೈಸೆಯಷ್ಟು ಕೆಲಸ ಮಾಡುವಲ್ಲಿ ವಿಫಲವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  5 ವರ್ಷ ಜೈಲಿನಲ್ಲಿದ್ದು ಬಿಡುಗಡೆಯಾದ ಕಾಶ್ಮೀರಿ ಪತ್ರಕರ್ತ, ಮತ್ತೆ ಬಂಧನ

“ಕಳೆದ 10 ವರ್ಷಗಳಿಂದ ಬಿಜೆಪಿ ಕಾಶ್ಮೀರಿ ಪಂಡಿತರನ್ನು ಮೂರ್ಖರನ್ನಾಗಿಸುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ಹಿಂತಿರುಗುವಂತೆ ನಾನು ಇತರ ಕಾಶ್ಮೀರಿ ಪಂಡಿತರ ಗುಂಪುಗಳಿಗೆ ಮನವಿ ಮಾಡುತ್ತೇನೆ. ನೆಹರೂ ಕುಟುಂಬವು ಮೂಲತಃ ಕಾಶ್ಮೀರಕ್ಕೆ ಸೇರಿದ್ದು ಮತ್ತು ಸ್ಥಳಾಂತರಗೊಂಡ ಪಂಡಿತರ ಬಗ್ಗೆ ಹೆಚ್ಚಿನ ಸಹಾನುಭೂತಿಯನ್ನು ಹೊಂದಿದೆ ಮತ್ತು ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷವೂ ಸಹ ಸಹಾನುಭೂತಿ ಹೊಂದಿದೆ” ಎಂದು ಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಕಾಶ್ಮೀರಿ ಪಂಡಿತರಿಗಾಗಿ ಹಲವಾರು ಕಾರ್ಯಗಳನ್ನು ಮಾಡಿರುವ ಕಾರಣದಿಂದಾಗಿ ನಾವು ಕಾಂಗ್ರೆಸ್‌ನೊಂದಿಗೆ ನಮ್ಮ ಸಂಘಟನೆಯನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಎಐಕೆಎಚ್‌ಎಫ್ ಅಧ್ಯಕ್ಷ ರತ್ತನ್ ಲಾಲ್ ಭಾನ್ ತಿಳಿಸಿದ್ದಾರೆ.

“ನಾವು ನಮ್ಮ ಕುಟುಂಬಕ್ಕೆ ಹಿಂತಿರುಗಿದಂತೆ ಭಾವಿಸುತ್ತೇವೆ. ಬಿಜೆಪಿಯವರು ಪಂಡಿತರನ್ನು ಶೋಷಣೆ ಮಾಡಿದ್ದು, ನಮಗಾಗಿ ಏನನ್ನೂ ಮಾಡಿಲ್ಲ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸ್ವಾಗತಾರ್ಹ ಬೆಳವಣಿಗೆ !
    ಎಲ್ಲರೂ ಒಂದಾಗೋಣ.
    ವಚನ ಭ್ರಷ್ಟ ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸೋಣ.
    ಎಲ್ಲರೂ ಒಂದಾಗಿ ನೆಮ್ಮದಿಯಿಂದ ಬದುಕಿ ಬಾಳೋಣ. ✋🇮🇳🙏

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X