ಗದಗ | ಗುಳೆ ತಪ್ಪಿಸಲು ಮನರೇಗಾ ಯೋಜನೆ ನೆರವು

Date:

Advertisements

ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ ‘ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ’ ಅಡಿಯಲ್ಲಿ ಗದಗಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಕೆಲಸ ಆರಂಭಿಸಲಾಗಿದೆ.

ಬರಗಾಲ ಪೀಡಿತ ಪ್ರದೇಶದಿಂದ ಮತ್ತು ಹಳ್ಳಿಗಳಿಂದ ಬಡವರು, ರೈತರು, ಕೂಲಿ-ಕಾರ್ಮಿರು ಜನ ಗುಳೆವು ಹೋಗುವುದನ್ನ ತಡೆಗಟ್ಟಲು ಮನಮೋಹನ್ ಸಿಂಗ ಅವರು ಪ್ರಧಾನಿಯಾದಾಗ ಜಾರಿಗೆ ತಂದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಕಾರಿಯಾಗಿದೆ.

ಸತತವಾಗಿ ಮೂರು ವರ್ಷದ ಅತಿವೃಷ್ಟಿಯಿಂದ ಭೂಮಿ ಜವಳು ಬಿದ್ದು ಅತೀ ತಂಪಿನಿಂದ ಬೆಳೆದ ಬೆಳೆ ಕೈಗೆ ಸಿಗದೇ ನಾಶವಾಗಿತ್ತು ಮತ್ತು ಕಳೆದ ವರ್ಷದ ಬರಗಾಲದಿಂದ ಉತ್ತರ ಕರ್ನಾಟಕದ ಜನ ತತ್ತರಿಸಿ, ಕಂಗಾಲಾಗಿದ್ದರು. ಇದರಿಂದ ಸಾವಿರಾರು ಸಂಖ್ಯೆಯಲ್ಲಿ ಗುಳೆ ಕೂಡ ಹೋಗಿದ್ದರು.

Advertisements

ನೂರಾರು ಸಂಖ್ಯೆಯಲ್ಲಿ ಗ್ರಾಮದ ಬಡ ರೈತ ಕೂಲಿ-ಕಾರ್ಮಿಕರು ಕೆಲಸ ಸಿಕ್ಕಿದ್ದರಿಂದ ಹರ್ಷಗೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ‘ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ’ಯು ಬಡವರಿಗೆ, ನಿರ್ಗತಿಕ ಕೂಲಿಕಾರ್ಮಿರಿಗೆ, ಬಡ ರೈತರಿಗೂ ಇದು ಎರಡೊತ್ತಿನ ಊಟಕ್ಕ ಅನುಕೂಲವಾಗಿದೆ. ಸರ್ಕಾರದ ಆದೇಶದ ಅನ್ವಯ ನಾವು ನೂರು ದಿನ ಕೆಲಸ ಕೊಡ್ತಿದ್ದೆವೆ ಮತ್ತು ಕೂಲಿ-ಕಾರ್ಮಿರು, ಬಡವರು ಗುಳೆವು ಹೋಗುವದನ್ನ ಬಿಟ್ಟು ಸರ್ಕಾರದ ಈ ಒಳ್ಳೆಯ ಯೋಜನೆ ಬಳಸಿಕೊಳ್ಳಬೇಕು ಎಂದು ಈ ಮಾದ್ಯಮದ ಮೂಲಕ ಕೇಳಿಕೋಳ್ತೆನಿ, ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖನಗೌಡ್ರ ವಡಕನಗೌಡ್ರ ಹೇಳಿದರು.

ವರದಿ: ಕೇಶವ ಕಟ್ಟಿಮನಿ, ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X