ದಾವಣಗೆರೆ | ಪಕ್ಷೇತರ ಅಭ್ಯರ್ಥಿ ಜಿ.ಬಿ ವಿನಯ್ ಕುಮಾರ್ ಕಕ್ಕರಗೊಳ್ಳ ಪರ ಮತಯಾಚನೆ

Date:

Advertisements

ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಕಕ್ಕರಗೊಳ್ಳ ಪರ ಮಹಿಳಾ ಮುಖಂಡರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಪ್ರಚಾರ ನಡೆಸಿ ಮತಯಾಚಿಸಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಂಕ್ಕುವಾಡ, ಹಳೆ ಕೊಳೇನಳ್ಳಿ, ಹೊಸ ಕೊಳೇನಳ್ಳಿ, ಕನಗಗೊಂಡನಹಳ್ಳಿ, ಬಲ್ಲೂರು, ಜಡಗನಹಳ್ಳಿ, ಬಲ್ಲೂರು, ಸಿರಿಗನಹಳ್ಳಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಪ್ರಚಾರ ಮಾಡಿದರು. ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 800ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ತಿಳಿದುಕೊಂಡಿರುವ ವಿನಯ್ ಕುಮಾರ್ ರವರಿಗೆ ಮತ ನೀಡಿ ಗೆಲ್ಲಿಸಿದರೆ ಮಹಿಳೆಯರ, ಮತ್ತು ಗ್ರಾಮೀಣ ಸಮಸ್ಯೆಗಳ ನಿವಾರಣೆಗೆ ಅನುಕೂಲವಾಗುತ್ತದೆ ಎಂದು ಪ್ರಚಾರ ನೆಡೆಸಿದರು.

ಕಕ್ಕರಗೊಳ್ಳ ಗ್ರಾಮದ ಯುವಕ, ವಿದ್ಯಾವಂತ, ಉನ್ನತ ಅಧಿಕಾರಿಗಳನ್ನು ಕೊಡುಗೆ ನೀಡಿದಂತಹ ಶೈಕ್ಷಣಿಕ ಕ್ರಾಂತಿಕಾರ, ಬಡವರ, ಹಿಂದುಳಿದವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸದಾ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುವ ವಿನಯ್ ಕುಮಾರ್ ಅವರಂಥವರಿಗೆ ಮತ ಹಾಕಿ ಗೆಲ್ಲಿಸಿದರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ,ಹಿಂದುಳಿದ ವರ್ಗಗಳ, ಬಡವರ ಏಳಿಗೆಗೆ ಬೇಕಾದ ಯೋಜನೆ ಜಾರಿಗೆ ತರಲು ಶ್ರಮಿಸಿ , ಅವರ ಏಳಿಗೆಗೆ ಬೇಕಾದ ನೆರವು ನೀಡುತ್ತಾರೆ, ಹಾಗಾಗಿ ವಿನಯ್ ಕುಮಾರ್ ರವರಿಗೆ ಮತ ನೀಡಲು ಮನವಿ ಮಾಡಿದರು.

Advertisements

ಕಕ್ಕರಗೊಳ್ಳ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ, ಸ್ತ್ರೀಶಕ್ತಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷರಾದ ಕೆ.ಬಿ. ಶಕುಂತಲಾ ಬಸವರಾಜಪ್ಪ, ಶೈಲಾ ಬಿ.ವಿ, ಕೊಳೇನಳ್ಳಿ ಸುನಂದಾ ವರ್ಣಿಕರ್, ಸ್ತ್ರೀಶಕ್ತಿ ಒಕ್ಕೂಟದ ಸದಸ್ಯರಾದ ವನಜಾಕ್ಷಮ್ಮ, ರುದ್ರೇಶ್ ಜಿ.ಎನ್. ಹೊಸಕೋಳೆನಳ್ಳಿ, ಪುರಂದರ ಲೋಕಿಕೆರೆ, ಚಿಕ್ಕಣ್ಣ ಮಲ್ಲಾಯಕನಹಳ್ಳಿ ಸೇರಿದಂತೆ ಮಹಿಳಾ ಮುಖಂಡರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X