ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

Date:

Advertisements

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್‌ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ.

ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್‌ 2 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.

ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರವು ಜನವರಿ 2, 2018ರಂದು ಅಧಿಸೂಚನೆ ಹೊರಡಿಸಿದ್ದು, ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ನಗದು ನೆರವು ನೀಡುವ ಪರ್ಯಾಯವಾಗಿ ಚುನಾವಣಾ ಬಾಂಡ್ ಯೋಜನೆಯನ್ನು ಆರಂಭಿಸಲಾಗಿತ್ತು.

Advertisements

ಯೋಜನೆಯ ನಿಯಮಾವಳಿಗಳ ಅನ್ವಯ,ದೇಶದ ಯಾವುದೇ ಪ್ರಜೆ ಅಥವಾ ದೇಶದಲ್ಲಿ ಸ್ಥಾಪಿತವಾದ ಸಂಸ್ಥೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದಾಗಿತ್ತು. ವೈಯಕ್ತಿಕವಾಗಿ ಅಥವಾ ಇತರರೊಂದಿಗೆ ಜಂಟಿಯಾಗಿ ಚುನಾವಣಾ ಬಾಂಡ್ಗಳನ್ನು ಖರೀದಿಸಬಹುದಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

1951ನೇ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 29ಎ ಅಡಿಯಲ್ಲಿ ಕಳೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಶೇ.1 ರಷ್ಟು ಮತ ಪಡೆದ ನೋಂದಾಯಿಸಲಾದ ರಾಜಕೀಯ ಪಕ್ಷಗಳು ಮಾತ್ರ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಅರ್ಹವಾಗಿದ್ದವು.

ಅಧಿಸೂಚನೆಯ ಪ್ರಕಾರ, ಅರ್ಹತೆ ಹೊಂದಿದ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಅಧಿಕೃತ ಬ್ಯಾಂಕ್‌ಗಳ ಮೂಲಕ ನಗದನ್ನಾಗಿ ಸ್ವೀಕರಿಸಬಹುದಾಗಿತ್ತು.

ಆದಾಗ್ಯೂ 2019ರ ಏಪ್ರಿಲ್‌ನಲ್ಲಿ , ಅರ್ಜಿಗಳನ್ನು ಸುದೀರ್ಘವಾಗಿ ವಿಚಾರಣೆ ನಡೆಸದೆ ಚುನಾವಣಾ ಬಾಂಡ್‌ಗಳ ಯೋಜನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ನಂತರದಲ್ಲಿ ಕಳೆದ ವರ್ಷದ ಅಕ್ಟೋಬರ್‌ 31ರಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ   ಕಾಂಗ್ರೆಸ್‌ನ ಜಯಾ ಠಾಕೂರ್, ಸಿಪಿಎಂ ಹಾಗೂ ಎನ್‌ಜಿಒ ಸಂಸ್ಥೆ ಎಡಿಆರ್‌ ಒಳಗೊಂಡ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ವಾದಗಳನ್ನು ಆಲಿಸಿತ್ತು.

ಈ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಪ್ರಕ್ರಿಯೆಗಳಲ್ಲಿ ನಗದು ಹಣವನ್ನು ಕಡಿಮೆ ಮಾಡುವ ಅಗತ್ಯತೆಯನ್ನು ಒತ್ತಿ ಹೇಳಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X