ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

Date:

Advertisements

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.

ಹಾರ್ಮುಜ್ ಜಲಸಂಧಿ ಬಳಿ ಇರಾನ್ ಮಿಲಿಟರಿ ವಶಪಡಿಸಿಕೊಂಡ ಸರಕು ಹಡಗಿನ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಟೆಹ್ರಾನ್ ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡಲಿದೆ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದೊಲ್ಲಾಹಿಯಾನ್ ಹೇಳಿದ್ದಾರೆ.

ಅಮೀರ್-ಅಬ್ದುಲ್ಲಾಹಿಯಾನ್ ಅವರು ಭಾನುವಾರ ದೂರವಾಣಿ ಮಾತುಕತೆ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಈ ಮಾಹಿತಿ ನೀಡಿದ್ದಾರೆ ಎಂದು ಇರಾನ್‌ ಹೇಳಿಕೆಯಲ್ಲಿ ತಿಳಿಸಿದೆ.

Advertisements

ಇದನ್ನು ಓದಿದ್ದೀರಾ?   17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್‌ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್

ಮಾತುಕತೆ ವೇಳೆ ಜೈಶಂಕರ್ ಅವರು ಹಡಗು ಎಂಎಸ್‌ಸಿ ಏರೀಸ್‌ನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

“ನಾವು ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನೀಡಲಾಗುತ್ತದೆ. ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಹೇಳಿದ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತದೆ” ಎಂದು ಅಮೀರ್-ಅಬ್ದುಲ್ಲಾಹಿಯಾನ್ ಅವರು ತಿಳಿಸಿರುವುದಾಗಿ ಇರಾನ್ ಮಾಧ್ಯಮ ವರದಿ ಮಾಡಿದೆ.

ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಇರಾನ್‌ನಿಂದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾರಾಟ: ಮುಚ್ಚಿದ್ದ ಜೋರ್ಡಾನ್, ಲೆಬನಾನ್, ಇರಾಕ್ ವಾಯು ಮಾರ್ಗ ಮತ್ತೆ ಆರಂಭ

ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದ್ದು ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ತಿಂಗಳ ಆರಂಭದಲ್ಲಿ ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಮಾಜಿ ಕಾನ್ಸುಲೇಟ್ ಮೇಲೆ ದಾಳಿ ನಡೆದ ಬಳಿಕ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯನ್ನು ಇಸ್ರೇಲ್ ನಡೆಸಿದೆ ಎಂದು ಇರಾನ್ ಆರೋಪಿಸಿದೆ. ಈ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ.

ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿತ್ತು. ಇಸ್ರೇಲ್‌ ಮೇಲೆ ಇರಾನ್‌ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ ಇಸ್ರೇಲ್ ಮೇಲೆ ಡ್ರೋನ್ ದಾಳಿಯನ್ನು ಆರಂಭಿಸಿದೆ. ಈಗ ಸರಕು ಸಾಗಣೆ ಹಡಗನ್ನು ವಶಕ್ಕೆ ಪಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X