ಹಾವೇರಿ | ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ, ಗವಿಸಿದ್ದಪ್ಪ ದ್ಯಾಮಣ್ಣನವರ

Date:

Advertisements

ಡಾ. ಬಿ.ಆರ್.ಅಂಬೇಡ್ಕರ್ ಅವರು ಸರ್ವರ ಏಳಿಗೆಯನ್ನು ಬಯಸಿ ಸುಭದ್ರ ಭಾರತಕ್ಕೆ ಸಂವಿಧಾನ ರಚನೆ ಮಾಡುವ ಮೂಲಕ ನಮ್ಮೆಲ್ಲರಿಗೂ ಲಿಖಿತ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು, ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ ಎಂದು ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಹೇಳಿದರು.

ಹಾವೇರಿ ನಗರದ ಕಾಗಿನೆಲೆ ರಸ್ತೆಯ ಶ್ರೀಮುರುಘ ರಾಜೇಂದ್ರಮಠದಲ್ಲಿ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ) ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಅವರು, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವದಡಿ ಎಲ್ಲರ ಏಳಿಗೆಗಾಗಿ ತಮ್ಮ ಶ್ರಮವಹಿಸಿ ಸುಭದ್ರ ಭಾರತ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದರು.

ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಂದೇಶವೇ ನಮಗೆ ಮಾದರಿಯಾಗಿದೆ. ಕಷ್ಟಕರ ಸಂದರ್ಭದಲ್ಲಿ ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಂತು ಎಲ್ಲರ ಆಶಾಕಿರಣವಾಗಿದ್ದಾರೆ. ಸಂವಿಧಾನ ನಮಗೆ ಮಹಾಗ್ರಂಥವಾಗಿದೆ. ಅವರ ಜೀವನ ತತ್ವ ಸಿದ್ದಾಂತ ಹಾಗೂ ಜೀವನ ಮಾರ್ಗದರ್ಶನದಿಂದ ನಾವೆಲ್ಲರೂ ಮುನ್ನಡಿಯಬೇಕಾಗಿದೆ. ಅವರ ತತ್ವ ಸಿದ್ದಾಂತ ಹಾಗೂ ವಿಚಾರಧಾರೆಗಳನ್ನು ನಾವು ಪಾಲಿಸುವುದು ಅಗತ್ಯವಾಗಿದೆ. ಮಾನವತವಾದಿತ್ವದ ಮೂಲಕ ಸಮಾಜದಲ್ಲಿ ನಾವೆಲ್ಲರೂ ಬಾಳಬೇಕಾಗಿದೆ. ಅವರ ಜೀವನ ಸಂದೇಶ ಅಳವಡಿಸಿಕೊಳ್ಳೋಣ ಎಂದು ಅವರ ಸಾಧನೆಯ ಬಗ್ಗೆ ಮಾತನಾಡಿದರು.

Advertisements

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮಂಜಪ್ಪ ಮರೋಳ ಮುಖಂಡರಾದ ಬಸವರಾಜ ಹೇಡಿಗೊಂಡ, ಎಸ್.ಜಿ.ಹೊನ್ನಪ್ಪನವರ, ವೈ.ಎನ್. ಮಾಸೂರ, ವಿಭೂತಿ ಶೆಟ್ಟಿ, ನಾಗರಾಜ ಮೇದಾರ, ಶಂಭುಲಿಂಗಪ್ಪ ದಿವಠರ, ರೇಣುಕಾ ಡೊಂಕಣ್ಣನವರ, ಬಸವರಾಜ ಕಾಳೆ, ಜಗದೀಶ ಹರಿಜನ, ಹನಮಂತಪ್ಪ ಸಿಡಿ, ಮಂಜಪ್ಪ ದೊಡ್ಡಮರೆಮ್ಮನವರ, ಮಹೇಶಪ್ಪ ಹರಿಜನ, ಡಾ.ಮಂಜುನಾಥ ವೇಷಗಾರ, ಮಂಜಪ್ಪ ಡಂಬಳ, ರಮೇಶ ವೇಷಗಾರ, ಶೋಭಾ ಮೇದಾರ, ಕರಬಸಪ್ಪ ಎಂ, ಲಲಿತಾ ಬಡಕ್ಕಣ್ಣನವರ, ಪ್ರಕಾಶ ಹರಿಜನ, ಬಸವರಾಜ ಚೌವ್ಹಾಣ, ಮರಿಸ್ವಾಮಿ ರಾಣೆಬೆನ್ನೂರ, ಸಂತೋಷ ಹರಿಜನ, ಮಾರುತಿ ಹರಿಜನ, ಹನಮಂತಪ್ಪ ತಗಡಿನಮನಿ, ಮೈಲಪ್ಪ ಡೊಳ್ಳಿನ, ಸೋಮಪ್ಪ ಬಸಾಪುರ, ರಾಮಪ್ಪ ಮುದಕಮ್ಮನವರ ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X