ಬೃಹತ್ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಆರ್‌ಸಿಬಿ: ಹೈದರಾಬಾದ್‌ಗೆ 25 ರನ್‌ಗಳ ಜಯ

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಬೆಂಗಳೂರು 25 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡ, ಆರ್‌ಸಿಬಿಗೆ ಗೆಲ್ಲಲು 288 ರನ್‌ಗಳ ಬೃಹತ್‌ ಗುರಿ ನೀಡಿತ್ತು.

ಈ ಗುರಿ ಬೆನ್ನತ್ತಿದ ಪಾಫ್ ಡು ಪ್ಲೆಸಿ ನೇತೃತ್ವದ ಆರ್‌ಸಿಬಿ ತಂಡ, ನಿಗದಿತ 20 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 262 ರನ್ ಗಳಿಸಲಷ್ಟೇ ಶಕ್ತವಾಯಿತು.

Advertisements

ದಿನೇಶ್ ಕಾರ್ತಿಕ್ ಏಕಾಂಗಿ ಹೋರಾಟ

288 ರನ್‌ಗಳ ಗುರಿಯನ್ನು ಸಾಧಿಸಲು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡು ಪ್ಲೆಸಿ ಉತ್ತಮ ಆರಂಭ ನೀಡಿದ್ದರು. ಆರ್‌ಸಿಬಿ, ಪವರ್ ಪ್ಲೇ ನಲ್ಲಿ ವಿಕೆಟ್ ನಷ್ಟವಿಲ್ಲದೇ 79 ರನ್ ದಾಖಲಿಸಿತ್ತು.

ಆ ಬಳಿಕ ಕೊಹ್ಲಿ ಔಟ್ ಆಗುತ್ತಿದ್ದಂತೆಯೇ ರನ್ ಗಳಿಸುವುದು ನಿಧಾನಗತಿಯಲ್ಲಿ ಸಾಗಿತು. ನಾಯಕ ಡು ಪ್ಲೆಸಿ ಅರ್ಧಶತಕ ಗಳಿಸಿ ರನ್ ಕಲೆ ಹಾಕುವಲ್ಲಿ ಯಶಸ್ವಿಯಾಗಿ ಮುಂದುವರಿಯುವಾಗ ಪ್ಯಾಟ್ ಕಮ್ಮಿನ್ಸ್ ವಿಕೆಟ್ ಪಡೆಯುವಲ್ಲಿ ಸಫಲರಾದರು. ಔಟ್ ಆಗುವುದಕ್ಕಿಂತ ಮುನ್ನ 28 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 7 ಬೌಂಡರಿ ನೆರವಿನಿಂದ 62 ರನ್ ಗಳಿಸಿದರು.

ಆರ್‌ಸಿಬಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಫಲರಾದಾಗ ಕ್ರೀಸ್‌ಗೆ ಬಂದ ದಿನೇಶ್ ಕಾರ್ತಿಕ್ ಏಕಾಂಗಿಯಾಗಿ ಹೋರಾಟ ನಡೆಸಿದರು. ಇವರಿಗೆ ಲೋಮ್‌ರೋರ್ ಸಾಥ್ ನೀಡಿದರಾದರೂ ಹೆಚ್ಚು ರನ್ ಗಳನ್ನು ಕೂಡಿ ಹಾಕಲು ವಿಫಲರಾದರು.

ಕೊನೆಯವರೆಗೂ ಹೋರಾಡಿದ ದಿನೇಶ್ ಕಾರ್ತಿಕ್, ಕೇವಲ 35 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಯ ನೆರವಿನಿಂದ 83 ರನ್ ಗಳಿಸಿ, ನಟರಾಜನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಆ ಮೂಲಕ ಆರ್‌ಸಿಬಿಯನ್ನು ಹೀನಾಯ ಸೋಲಿನಿಂದ ಕಾಪಾಡಿದರು. ಕೊನೆಯಲ್ಲಿ ಅನುಜ್ ರಾವತ್ 14 ಎಸೆತಗಳಲ್ಲಿ 25 ರನ್ ಗಳಿಸಿ ಔಟಾಗದೆ ಉಳಿದರು.

ಇಂದಿನ ಪಂದ್ಯದಲ್ಲಿ ಹೈದರಾಬಾದ್ ತಂಡದ 287 ಹಾಗೂ ಆರ್‌ಸಿಬಿಯ 262 ರನ್ ಸೇರಿ ಒಂದೇ ಪಂದ್ಯದಲ್ಲಿ 549 ರನ್ ದಾಖಲಾಯಿತು. ಇದು ಟಿ20 ಇತಿಹಾಸದಲ್ಲಿ ದಾಖಲಾದ ಬೃಹತ್ ಮೊತ್ತವಾಗಿದೆ.

ಹೈದರಾಬಾದ್ ಪರ ಬೌಲಿಂಗ್‌ನಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ ಮೂರು, ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಮಯಾಂಕ್ ಮಾರ್ಕಾಂಡೆ 2 ಹಾಗೂ ನಟರಾಜನ್ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X