ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

Date:

Advertisements

“ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ” ಎಂದು ಏಕವಚನದಲ್ಲೇ ದಾಳಿ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಂಗಳವಾರ ತಿರುಗೇಟು ನೀಡಿ, ಪ್ರತಿ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಡಿ ಕೆ ಶಿವಕುಮಾರ್ ಮಹಿಳೆಯನ್ನು ಅಪಹರಿಸಿ‌, ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97ರಲ್ಲಿ. ಅದರ ದಾಖಲೆಗಳು ನನ್ನ ಬಳಿ ಇವೆ” ಎಂದಿದ್ದಾರೆ.

“ಒಂದು ಮಗುವನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಏನು ಮಾಡಿದ್ದೀರಿ? ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಜಮೀನು ಬರೆಸಿಕೊಳ್ಳಲು ಏನು ಮಾಡಿದ್ದೀರಿ? ಚೆಕ್ ಕೊಟ್ಟಿರುವುದು ಬೇಕಾ? ಎಲ್ಲ ದಾಖಲೆ ಇದೆ. ನಿನ್ನೆ ಮೊದಲ ಬಾರಿಗೆ ಇದನ್ನ ಹೇಳಿದ್ದೆ. ಅದಕ್ಕೆ ಚರ್ಚೆಗೆ ಕರೆಯುತ್ತಾರೆ. ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ, ಕಂತೆ ಗಟ್ಟಲೇ ದಾಖಲೆ ಇಟ್ಟು ಮಾತನಾಡುವೆ” ಎಂದು ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದ್ದಾರೆ.

Advertisements

“ಈಗ ಶಾಂತಿನಗರ ಹೌಸಿಂಗ್ ಸೊಸೈಟಿ, ಡೂಪ್ಲಿಕೇಟ್ ಸೊಸೈಟಿನ ಒರಿಜಿನಲ್ ಮಾಡಿಕೊಳ್ಳಲಿಲ್ವಾ? ಈ ದೇಶದಲ್ಲಿನ ಸಂಸ್ಥೆಗಳನ್ನು ದುಡ್ಡಿನಲ್ಲಿ ಕೊಂಡುಕೊಂಡು ಯಾವಾಗ ಏನು ಬೇಕಾದ್ರು ಮಾಡುವ ವ್ಯಕ್ತಿ ಡಿಕೆ ಶಿವಕುಮಾರ್” ಎಂದು ಆರೋಪಿಸಿದರು.

“ಒಕ್ಕಲಿಗ ನಾಯಕತ್ವ ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆನಾ? ಡಿಕೆಶಿ ಸತ್ಯ ಹರಿಶ್ಚಂದ್ರ ಮೊಮ್ಮಗ. ದೊಡ್ಡ ಆಲಹಳ್ಳಿಯಲ್ಲಿ ಹುಟ್ಟುವಾಗ ಸತ್ಯ ಹರಿಶ್ಚಂದ್ರ ಬಂದು ನೀನು ಸತ್ಯನೇ ನುಡಿಬೇಕು ಎಂದು ಅವರಲ್ಲಿ ಹೇಳಿ ಹೋಗಿದ್ದಾರೆ. ನಮಗೆ ಸುಳ್ಳು ಹೇಳಿ ಎಂದು ಹೇಳಿದ್ದಾರೆ” ಎಂದು ಲೇವಡಿ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X