ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

Date:

Advertisements

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಂಶುಪಾಲ ಕಲ್ಲೇಶ್‌ ಹೇಳಿದರು.

ದಾವಣಗೆರೆ ಜಿಲ್ಲೆಯ ಜಗಳೂರು ನಗರದ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಗಳೂರು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಬಿ.ಆ‌ರ್. ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಒಬ್ಬ ಶಿಕ್ಷಣ ಪ್ರೇಮಿಯಾಗಿ ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣ ಪಡೆಯಬೇಕು ಎಂಬ ಅವರ ಪರಿಶ್ರಮ ಬಹಳಷ್ಟಿದೆ. ಅವರ ಧ್ಯೇಯ ವಾಕ್ಯದಂತೆ ಮೊದಲು ಶಿಕ್ಷಿತರಾಗಬೇಕು ನಂತರ ಸಂಘಟಿತರಾಗಬೇಕು ತದನಂತರ ಹೋರಾಟಕ್ಕೆ ಬದ್ಧರಾಗಬೇಕು ಆಗ ಮಾತ್ರ ದೇಶ ಮುನ್ನಡೆಯಲು ಸಾಧ್ಯ ಎಂದರು.

Advertisements

ಇಂದು ನಾವೆಲ್ಲ ಶಿಕ್ಷಣ ಪಡೆದು ಉನ್ನತ ಮಟ್ಟದಲ್ಲಿ ಇರುವುದಕ್ಕೆ ನೇರ ಕಾರಣ ಅದು ಅಂಬೇಡ್ಕರ್ ಅವರು ಎಂಬುವುದನ್ನು ಎಲ್ಲರೂ ಮನಗಾಣಬೇಕು. ಅಂಬೇಡ್ಕರ್ ಅವರನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ವಿಚಾರ ಚಿಂತನೆಗಳನ್ನು ತಿಳಿದುಕೊಂಡು ಸಮಾಜದಲ್ಲಿನ ಓರೆಕೋರೆಗಳನ್ನು ತಿದ್ದಲು ಶ್ರಮ ವಹಿಸಬೇಕೆಂದು ಪ್ರಶಿಕ್ಷಣಾರ್ಥಿಗಳಿಗೆ ತಿಳಿಸಿದರು.

ದಸಂಸ ಸಂಚಾಲಕ ಮಲೆಮಾಚಿಕೆರೆ ಬಿ. ಸತೀಶ್ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ದುಡಿದವರಲ್ಲ, ಈ ದೇಶದ ಪ್ರತಿಯೊಬ್ಬ ಪ್ರಜೆಗಾಗಿ ಅವರು ಶ್ರಮ ವಹಿಸಿದ್ದಾರೆ. ಎಲ್ಲ ಧರ್ಮ ಗ್ರಂಥಗಳಿಗಿಂತ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಶ್ರೇಷ್ಠ ಗ್ರಂಥವಾಗಿದೆ. ಪ್ರಪಂಚದಲ್ಲೇ ಪ್ರಥಮ ಬಾರಿಗೆ ಮಹಿಳೆಯರಿಗೆ ಮತದಾನ ಹಕ್ಕು ಕೊಟ್ಟಿರುವ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಅದಲ್ಲದೆ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಪ್ರಬಲವಾಗಿ ಸ್ಥಾನಮಾನ ಕಂಡುಕೊಂಡಿರುವುದಕ್ಕೆ ಅಂಬೇಡ್ಕರ್ ಅವರ ಪರಿಶ್ರಮ ಅಗಾಧವಾಗಿದೆ. ವಿದೇಶಿಗರು ಅಂಬೇಡ್ಕ‌ರ್ ಅವರನ್ನು ಜ್ಞಾನದಿಂದ ನೋಡಿದರೆ, ದುರ್ದೈವ ಈ ದೇಶದಲ್ಲಿ ಅವರನ್ನು ಜಾತಿಯ ದೃಷ್ಟಿಯಿಂದ ನೋಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಜಗತ್ತಿನಲ್ಲೇ ಪ್ರತೀ ನಿಮಿಷಕ್ಕೂ ಗೌರವಕ್ಕೆ ಒಳಪಡುವ ವ್ಯಕ್ತಿಯೆಂದರೆ ಅದು ಅಂಬೇಡ್ಕರ್ ಅವರು ಮಾತ್ರ, ಅದಲ್ಲದೆ ಜಗತ್ತಿನಲ್ಲೇ ಅತೀ ಹೆಚ್ಚು ಪುತ್ಥಳಿಗಳನ್ನೂ ಹೊಂದಿರುವ ವ್ಯಕ್ತಿಯಾಗಿದ್ದಾರೆ. 36 ಪದವಿಗಳನ್ನು ಪಡೆದುಕೊಂಡು ಜಗತ್ತಿನಲ್ಲೇ ಶ್ರೇಷ್ಠ ಜ್ಞಾನಿಗಳ ಪಟ್ಟಿಯಲ್ಲಿ 2ನೇಯ ಸ್ಥಾನದಲ್ಲಿದ್ದಾರೆ. ಅಂಬೇಡ್ಕರ್ ಅವರು ಈ ದೇಶಕ್ಕೆ ಬೃಹತ್‌ ಸಂವಿಧಾನ ನೀಡಿ ಸರ್ವರಿಗೂ ಬೆಳಕಾಗಿದ್ದಾರೆ. ಅವರ ವಿಚಾರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಆರ್.ವಿ. ಹೇಮರೆಡ್ಡಿ, ಪತ್ರಕರ್ತ ಜಗಜೀವನ್ ರಾಮ್ ಆರ್.ಎಲ್. ಉಪನ್ಯಾಸಕರಾದ ಬಸಪ್ಪ, ರವಿ, ಕೊಟ್ರೇಶ್, ರಾಘವೇಂದ್ರ, ಪ್ರೇಮಾ, ಕಾಶಿನಾಥ್, ಸ್ವಾಮಿ ಹಾಗೂ ಸಿಬ್ಬಂದಿ ವರ್ಗ ಮತ್ತು ಪ್ರಶಿಕ್ಷಣಾರ್ಥಿಗಳಾದ ವಿ.ಸಿ.ಚೌಡಪ್ಪ, ಅಮೃತ, ಉಮಾ ಜಿ, ಸೇರಿದಂತೆ ಅನೇಕ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X