ಚುನಾವಣೆ 2023 | ಮೌಢ್ಯಕ್ಕೆ ಸೆಡ್ಡು; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

Date:

Advertisements
  • ತಮ್ಮ ಪುತ್ರನೊಂದಿಗೆ ಬಂದು ಸರಳವಾಗಿ ನಾಮಪತ್ರ ಸಲ್ಲಿಕೆ
  • ಬೆಳಗಾವಿಯ 18 ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನನ್ನದೇ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ವಿಶೇಷ ಆಚರಣೆ ಮತ್ತು ಸಂಪ್ರದಾಯಗಳಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ಮತ್ತೊಮ್ಮೆ ಅಂತದ್ದೇ ಆಚರಣೆ ಮಾಡಿದ್ದು, ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಮತ್ತೆ ಸುದ್ದಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ್‌ ಇಂದು ಅಮಾವಾಸ್ಯೆ ಮತ್ತು ಸೂರ್ಯ ಗ್ರಹಣ ಇರುವುದು ಮಾತ್ರವಲ್ಲದೇ ರಾಹುಕಾಲದಲ್ಲಿಯೇ ತಮ್ಮ ಪುತ್ರನೊಂದಿಗೆ ತೆರಳಿ ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ನಾನು ಮೌಢ್ಯ ವಿರೋಧ ಮಾಡಿದರೆ ಬಿಜೆಪಿಯವರು ನನ್ನನ್ನು ವಿರೋಧ ಮಾಡುತ್ತಾರೆ. ಇದು ಸ್ವಾಭಾವಿಕ, ರಾಜಕೀಯದಲ್ಲಿ ಇರುವಾಗ ಯಾವುದಾದರು ಕಾರಣಕ್ಕೆ ವಿರೋಧ ಮಾಡಲೇಬೇಕು ಹಾಗಾಗಿ ಇಂತಹ ಚಿಕ್ಕ ಕಾರಣಕ್ಕಾಗಿ ವಿರೋಧ ಮಾಡುತ್ತಾರೆ. ಆದರೆ, ನಾನು ಕರ್ನಾಟದಲ್ಲಿ ಟಾಪ್ 10ರಲ್ಲಿ ಆಯ್ಕೆ ಆಗುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡುತ್ತಾ, “ಈ ಸಲ ನನಗೆ ಎಷ್ಟು ಮತ ಬರುತ್ತೆ, ನಮ್ಮ ಪರವಾಗಿ ಎಷ್ಟು ಹಿಂದುಗಳಿದ್ದಾರೆ ಎಂದು ಮೇ 13ರ ಬೆಳಗ್ಗೆ 11 ಗಂಟೆಗೆ ಮತಗಳ ಮೂಲಕವೇ ಉತ್ತರ ಕೊಡುತ್ತೇವೆ” ಎಂದು ತಿರುಗೇಟು ನೀಡಿದರು.

ಅಥಣಿಗೆ ಮೋದಿ ಬಂದು ಅವರ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲಿ, ನಮ್ಮ ಅಭ್ಯರ್ಥಿ ಪರವಾಗಿ ಅಥಣಿ ಮತ್ತು ಕಾಗವಾಡಕ್ಕೆ ಹೋಗಿ ಪ್ರಚಾರ ಮಾಡುತ್ತೇವೆ. ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ನನ್ನ ಮೇಲೆ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X