ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ 2 ದಿನ ಪ್ರಚಾರ ನಿಷೇಧ

Date:

Advertisements

ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಎರಡು ದಿನ ಪ್ರಚಾರದಿಂದ ನಿಷೇಧ ಹೇರಿದೆ.

ಆಯೋಗದ ಆದೇಶದ ಹಿನ್ನೆಲೆಯಲ್ಲಿ ಸುರ್ಜೇವಾಲ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳವರೆಗೂ ಯಾವುದೇ ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ.

“ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಸಂಬಂಧಿತ ವಿಷಯಗಳಿಗೆ ಸುರ್ಜೇವಾಲ ಅವರಿಗೆ ಆಯೋಗವು ನೋಟಿಸ್ ನೀಡುತ್ತದೆ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಸುರ್ಜೇವಾಲ ಅವರು ಗೌರವಕ್ಕೆ ಕುಂದು ತರುವಂತ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಚುನಾವಣಾ ಆಯೋಗವು ಬಲವಾಗಿ ಖಂಡಿಸುತ್ತದೆ” ಎಂದು ಚುನಾವಣಾ ಆಯೋಗ ನೋಟಿಸ್‌ನಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

“ಈ ಹಿನ್ನೆಲೆಯಲ್ಲಿ ಸಂವಿಧಾನದ 324ನೇ ವಿಧಿಯಡಿ ಆಯೋಗವು ಸುರ್ಜೇವಾಲ ಅವರಿಗೆ ಸಾರ್ವಜನಿಕ ಸಭೆಗಳು, ಮೆರವಣಿಗೆಗಳು ರ್ಯಾಲಿಗಳು ಹಾಗೂ ಸಂದರ್ಶನ ಒಳಗೊಂಡ ಯಾವುದೇ ಪ್ರಚಾರದಲ್ಲಿ ಮುಂದಿನ 24 ಗಂಟೆಗಳ ಕಾಲ ತೊಡಗುವಂತಿಲ್ಲ” ಎಂದು ಹೇಳಿದೆ.

ಈ ಲೋಕಸಭಾ ಚುನಾವಣೆಯಲ್ಲಿ ಸುರ್ಜೇವಾಲ ಅವರು ಆಯೋಗದಿಂದ ನಿಷೇಧಗೊಂಡ ಮೊದಲ ರಾಜಕಾರಣಿಯಾಗಿದ್ದಾರೆ.

ಬಿಜೆಪಿ ಸಂಸದೆ ಹೇಮಾಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ನಂತರ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರು ಕ್ಷಮೆಯಾಚಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X