ಶೇಕಡ 90ರಷ್ಟು ಸಂವಿಧಾನ ಸಭೆ ಸದಸ್ಯರು ‘ಸನಾತನಿಗಳು’ ಎಂದ ಪ್ರಧಾನಿ ಮೋದಿ!

Date:

Advertisements

ಬಿಜೆಪಿಯು ಭಾರತದ ಸಂವಿಧಾನ ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಪ್ರಧಾನಿ ನರೇಂದ್ರ ಮೋದಿ “ಶೇ.90ರಷ್ಟು ಸಂವಿಧಾನ ಸಭೆ ಸದಸ್ಯರು ಸನಾತನಿಗಳು ಆಗಿದ್ದರು, ಸಂವಿಧಾನವನ್ನು ರಚಿಸಿದ ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರು ಕೂಡಾ ಸಂವಿಧಾನವನ್ನು ಬದಲಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಬಿಹಾರದ ಗಯಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಸುಳ್ಳುಗಳನ್ನು ಹರಡುವ ಮೂಲಕ ಸಂವಿಧಾನವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?   ರಾಜಸ್ಥಾನ | ಕೆಲವು ಕಠಿಣ ನಿರ್ಧಾರ ತಳೆಯಬೇಕಿದೆ: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ!

Advertisements

“ಡಾ ರಾಜೇಂದ್ರ ಪ್ರಸಾದ್ ಅವರು ಸಂವಿಧಾನ ರಚನಾ ಸಭೆಯ ನೇತೃತ್ವ ವಹಿಸಿದ್ದರು. ಸನಾತನಿಗಳು ಬೆಂಬಲಿಸಿದರು” ಎಂದು ಇದೇ ಸಂದರ್ಭದಲ್ಲಿ ಮೋದಿ ಹೇಳಿದ್ದಾರೆ. “ಸಂವಿಧಾನ ಸಭೆಯಲ್ಲಿ, 80-90 ಪ್ರತಿಶತಕ್ಕೂ ಹೆಚ್ಚು ಸದಸ್ಯರು ಸನಾತನಿಗಳು, ಅವರು ಅಂಬೇಡ್ಕರ್ ಅವರಿಗೆ ಭಾರತದ ಅಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಲು ತಮ್ಮ ಬೆಂಬಲವನ್ನು ನೀಡಿದರು” ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

“ಸಂವಿಧಾನವನ್ನು ರಾಜಕೀಯ ಶಕ್ತಿಯನ್ನಾಗಿ ಬಳಸಿಕೊಳ್ಳುವವರು ಸುಳ್ಳುಗಳನ್ನು ಹರಡುವುದನ್ನು ನಿಲ್ಲಿಸಿ. ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಕೂಡ ಭಾರತದ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಸಂವಿಧಾನವನ್ನು ಅವಮಾನಿಸುವವರಿಗೆ ಸಾರ್ವಜನಿಕ ಜೀವನದಲ್ಲಿ ಉಳಿಯುವ ಹಕ್ಕಿಲ್ಲ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಅನಂತ ಕುಮಾರ್‌ರವರ ಸಂವಿಧಾನ ಬದಲಾವಣೆ ಹೇಳಿಕೆ ಮನುಸ್ಮೃತಿ ಜಾರಿಯ ಆಲೋಚನೆ: ಸಿಎಂ ಸಿದ್ದರಾಮಯ್ಯ

ಈ ಹಿಂದೆ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಮತ್ತು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆಯನ್ನು ನೀಡಿದ್ದರು. “ಸಂವಿಧಾನ ಬದಲಾವಣೆ ಮಾಡಬೇಕಾದರೆ 400 ಸ್ಥಾನವನ್ನು ನಾವು ಗೆಲ್ಲಬೇಕು” ಎಂದು ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಇದೀಗ ಬಿಜೆಪಿಯ ಫೈಜಾಬಾದ್ ಸಂಸದ ಲಲ್ಲು ಸಿಂಗ್ ಅವರು “ಸಂವಿಧಾನದ ಬದಲಾವಣೆಗೆ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ” ಎಂದು ಹೇಳಿದ್ದಾರೆ.

ಎಪ್ರಿಲ್ 13 ರಂದು ಅಯೋಧ್ಯೆಯ ಮಿಲ್ಕಿಪುರ್ ತೆಹಸಿಲ್‌ನಲ್ಲಿ ಮಾತನಾಡಿದ ಲಲ್ಲು ಸಿಂಗ್ ಈ ಹೇಳಿಕೆ ನೀಡಿದ್ದು ಇದರ ವಿಡಿಯೋ ಈಗ ವೈರಲ್‌ ಆಗಿದೆ. “ಲೋಕಸಭೆ ಚುನಾವಣೆಯಲ್ಲಿ 272 ಸಂಸದರಿದ್ದರೆ ಸರ್ಕಾರ ರಚಿಸಬಹುದು, ಆದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಅಥವಾ ಹೊಸ ಸಂವಿಧಾನವನ್ನು ಪಡೆಯಬೇಕಿದ್ದರೆ ನಮಗೆ ಮೂರನೇ ಎರಡರಷ್ಟು ಬಹುಮತ ಬೇಕು” ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X