ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ: 3 ಚಾಕು, 40 ಸಾವಿರ ನಗದು ಜಪ್ತಿ

Date:

Advertisements

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಆರಂಭಕ್ಕೂ ಕೆಲವೇ ದಿನಗಳ ಮುಂಚೆ ಈ ದಾಳಿ ನಡೆದಿದೆ. ಚುನಾವಣೆ ಹಿನ್ನೆಲೆ, ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಿಗ್ಗೆ 8ಗಂಟೆ ಸುಮಾರು 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳ ತಂಡ ಜೈಲಿನ ಎಲ್ಲ ಬ್ಯಾರಕ್ಗಳ ಮೇಲೆ ದಾಳಿ ನಡೆಸಿದ್ದಾರೆ. ಬ್ಯಾರಕ್ನಲ್ಲಿದ್ದ ಕೈದಿಗಳ ಬಳಿಯಿಂದ ₹40 ಸಾವಿರ ನಗದು, ಮೂರು ಚಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisements

ಮುಂದಿನ ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗಿದೆ. ಬೆನ್ನಲ್ಲೇ ಜೈಲಿನಲ್ಲಿರುವ ಕೆಲ ರೌಡಿಶೀಟರ್ಗಳು, ತಮ್ಮ ಸಹಚರರ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಮಾಹಿತಿ ಇತ್ತು. ಹೀಗಾಗಿ, ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆಯ ಬಾರದು, ಮತದಾರರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ.

ಜೈಲಿನಲ್ಲಿ ಮೂರು ಚಾಕು ಹಾಗೂ ನಗದು ಪತ್ತೆಯಾಗಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮೊದಲ ಹಂತದ ಚುನಾವಣೆ | ಏಪ್ರಿಲ್ 17ರಂದು ಬಹಿರಂಗ ಪ್ರಚಾರಕ್ಕೆ ತೆರೆ

ಜೈಲಿನ ಒಳಗಿನಿಂದಲೇ ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಹಾಗೂ ಮೊಬೈಲ್ ಬಳಕೆಯನ್ನು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗದು, ತಂಬಾಕು ಉತ್ಪನ್ನಗಳು ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X