ಮುಜಾಫರ್‌ನಗರ| ಯೋಗಿ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ ಬಹಿಷ್ಕಾರಕ್ಕೆ ರಜಪೂತ ಮಹಾಪಂಚಾಯತ್ ಕರೆ

Date:

Advertisements

ಮುಜಾಫರ್‌ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಖೇಡಾ ಗ್ರಾಮದಲ್ಲಿ ರಜಪೂತ ಮಹಾಪಂಚಾಯತ್ ನಡೆದಿದ್ದು, ಉತ್ತರ ಪ್ರದೇಶದ ಮೊದಲ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ.

‘ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸದಿರುವುದು, ನಿರುದ್ಯೋಗ ಏರಿಕೆ, ಅಗ್ನಿವೀರ್ ಯೋಜನೆ ಮತ್ತು ರಜಪೂತ ಸಮಾಜದ ಅವಮಾನವನ್ನು ವಿರೋಧಿಸಿ’ ಬಿಜೆಪಿ ನಾಯಕರನ್ನು ಬಹಿಷ್ಕರಿಸಲು ರಜಪೂತ ಮಹಾಪಂಚಾಯತ್ ಕರೆ ನೀಡಲಾಗಿದೆ.

ರಜಪೂತ ಅಧಿಕಾರವನ್ನು ಸಂಕೇತಿಸುವ ಸಿವಾಲ್ ಖಾಸ್ (ಬಾಗ್‌ಪತ್), ಸರ್ಧಾನ (ಮೀರತ್) ಮತ್ತು ಖತೌಲಿ (ಮುಜಫರ್‌ನಗರ) ಅಸೆಂಬ್ಲಿ ಸ್ಥಾನಗಳ ಅಡಿಯಲ್ಲಿ ಬರುವ 24 ಹಳ್ಳಿಗಳ ಒಕ್ಕೂಟವಾದ ‘ಚೌಬಿಸಿ’ ಆಯೋಜಿಸಿದ ಮಹಾಪಂಚಾಯತ್ ಸಮಯದಲ್ಲಿ ಸಮುದಾಯದ ಮುಖಂಡರು ಮುಜಾಫರ್ ನಗರದಲ್ಲಿ ಎಸ್‌ಪಿ ಅಭ್ಯರ್ಥಿ ಹರೇಂದ್ರ ಮಲಿಕ್ ಅವರಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

ಹಾಗೆಯೇ ಈ ಪ್ರದೇಶದ ಇತರ ಲೋಕಸಭಾ ಕ್ಷೇತ್ರಗಳಲ್ಲಿ, “ಬಿಜೆಪಿಯನ್ನು ಸೋಲಿಸುವ ಅಥವಾ ಬಿಜೆಪಿ ಪ್ರತಿಸ್ಪರ್ಧಿಯಾಗಿ ನಿಂತಿರುವ ಅಭ್ಯರ್ಥಿಗೆ ಮತ ಹಾಕುತ್ತೇವೆ” ಎಂದು ರಜಪೂತ ಸಮುದಾಯ ಘೋಷಣೆ ಮಾಡಿದೆ. ಜೊತೆಗೆ ರಜಪೂತ ಸಮುದಾಯದ ಇಬ್ಬರು ಮಾಜಿ ಪ್ರಧಾನಿಗಳಾದ ವಿ ಪಿ ಸಿಂಗ್ ಮತ್ತು ಚಂದ್ರಶೇಖರ್ ಅವರಿಗೆ ಇನ್ನೂ ಏಕೆ ಭಾರತ ರತ್ನ ನೀಡಿಲ್ಲ ಎಂದು ಸಮುದಾಯದ ನಾಯಕರುಗಳು ಪ್ರಶ್ನಿಸಿದರು.

ಇನ್ನು “2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ 2013 ರಲ್ಲಿ ಇದೇ ಮೈದಾನದಲ್ಲಿ ನಡೆದ ಇದೇ ರೀತಿಯ ಪಂಚಾಯತ್ ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಗೆ ಆಧಾರವಾಗಿದೆ. ಈಗ ಇದೇ ಮಹಾಪಂಚಾಯತ್ ಈ ಪ್ರದೇಶದಲ್ಲಿ ಬಿಜೆಪಿಯ ಅವನತಿಗೆ ಕಾರಣವಾಗಲಿದೆ” ಎಂದು ರಜಪೂತ ಸಮುದಾಯದ ಮುಖಂಡರು ಹೇಳಿದ್ದಾರೆ.

ಮಹಾಪಂಚಾಯತ್‌ನ ಸಂಘಟಕರಲ್ಲಿ ಒಬ್ಬರಾದ ಕಿಸಾನ್ ಮಜ್ದೂರ್ ಸಂಘಟನೆಯ ಮುಜಾಫರ್‌ನಗರ ಜಿಲ್ಲಾಧ್ಯಕ್ಷ ದೀಪಕ್ ಸೋಮ್, “ಠಾಕೂರರು ಸಿಎಂ ಆದಿತ್ಯನಾಥ್ ಅವರನ್ನು ಬೆಂಬಲಿಸುತ್ತಾರೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಗುಜರಾತ್‌| ಕ್ಷತ್ರಿಯ ಸಮುದಾಯದ ಪ್ರತಿಭಟನೆ; ಬಿಜೆಪಿಯಲ್ಲಿ ಮುಂದುವರಿದ ತಿಕ್ಕಾಟ

ಸ್ವಾಭಿಮಾನ ಮಹಾಪಂಚಾಯತ್ ಎಂಬ ವೇದಿಕೆಯಲ್ಲಿ ಈ ಮಹಾಪಂಚಾಯತ್ ಅನ್ನು ರಜಪೂತರು ನಡೆಸಿದ್ದು, ‘ಕಮಲ್ ಕಾ ಫೂಲ್ ಹಮಾರಿ ಭೂಲ್’ (ಬಿಜೆಪಿ ಚಿಹ್ನೆ ಕಮಲವನ್ನು ಆಯ್ಕೆ ಮಾಡಿದ್ದು ನಮ್ಮ ತಪ್ಪು) ಎಂದು ಬರೆಯಲಾಗಿದೆ. ಹಾಗೆಯೇ ಬಿಜೆಪಿ ಚುನಾವಣಾ ಚಿಹ್ನೆಯ ಮೇಲೆ ‘X’ ಎಂದು ಬರೆಯಲಾಗಿದೆ. ಈ ಮೂಲಕ ಬಿಜೆಪಿ ನಾಯಕರ ಬಹಿಷ್ಕಾರವನ್ನು ಘೋಷಿಸಲಾಗಿದೆ.

ಸಹರಾನ್‌ಪುರದ ನಾನೌಟಾದ ನಂತರ ಇದು ಎರಡನೇ ಮಹಾಪಂಚಾಯತ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿಂದೆ ಸಹರಾನ್‌ಪುರದ ನಾನೌಟಾದಲ್ಲಿ ಟಿಕೆಟ್ ಹಂಚಿಕೆ, ಪ್ರಾತಿನಿಧ್ಯ ಮತ್ತು ಯೋಜನೆಗಳ ಅನುಷ್ಠಾನದ ಬಗ್ಗೆ ಠಾಕೂರ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.

“ರಾಷ್ಟ್ರೀಯತೆ, ಪಾಕಿಸ್ತಾನ ಅಥವಾ ಚೀನಾವನ್ನು ಹೆದರಿಸಿ ಯಾರೂ ಮತಗಳನ್ನು ಪಡೆಯಲು ಸಾಧ್ಯವಿಲ್ಲ. ರಜಪೂತರಷ್ಟೇ ಅಲ್ಲ, ಎಲ್ಲ 36 ಜಾತಿಗಳೂ ನಮ್ಮೊಂದಿಗಿವೆ. ಯಾರೂ ನಮ್ಮನ್ನು ರಾಷ್ಟ್ರೀಯತೆ, ಪಾಕಿಸ್ತಾನ ಅಥವಾ ಚೀನಾದ ಹೆಸರಿನಲ್ಲಿ ಹೆದರಿಸಿ ಮತ ಪಡೆಯಲು ಸಾಧ್ಯವಿಲ್ಲ. ನಮ್ಮ ಪೂರ್ವಜರು ಗಡಿಯಲ್ಲಿ ಹೋರಾಡಿದ್ದಾರೆ, ನಮ್ಮ ಸಹೋದರರು ಹೋರಾಡುತ್ತಿದ್ದಾರೆ, ಯಾವುದೇ ಬಿಜೆಪಿ ಸಂಸದ ಅಥವಾ ಅವರ ಕುಟುಂಬ ಸದಸ್ಯರು ಅಲ್ಲಿ ಯುದ್ಧ ಮಾಡಲ್ಲ” ಎಂದು ಕಿಸಾನ್ ಮಜ್ದೂರ್ ಸಂಘಟನೆಯ ಅಧ್ಯಕ್ಷರಾದ ಪೂರಣ್ ಸಿಂಗ್ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

Download Eedina App Android / iOS

X