‘ಕರ್ನಾಟಕಕ್ಕೆ ಕೇಂದ್ರದ ಮೋಸ’ ಮೋದಿಯ ಆಶೀರ್ವಾದವೇ, ಶಾಪವೇ: ಸಿದ್ದರಾಮಯ್ಯ

Date:

Advertisements
  • ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಜೆಪಿ ನಡ್ಡಾಗೆ ಪ್ರಶ್ನೆಗಳ ಸುರಿಮಳೆ
  • ‘40% ಕಮಿಷನ್ ಪಡೆಯುತ್ತಿರುವುದು ಮೋದಿ ಆಶೀರ್ವಾದವೇ ಶಾಪವೇ?’

‘ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು, ಬಿಜೆಪಿಗೆ ಮತ ನೀಡಬೇಕು’ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿ, ಕೆಲವು ಪ್ರಶ್ನೆಗಳನ್ನು ನಡ್ಡಾರವರ ಮುಂದಿಟ್ಟಿದ್ದಾರೆ. “ಜೆಪಿ ನಡ್ಡಾ ಅವರೇ, ತೆರಿಗೆ ಹಂಚಿಕೆಯ ತಾರತಮ್ಯ ನೀತಿಯಲ್ಲಿ ಕರ್ನಾಟಕ ಅಂದಾಜು ಒಂದು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡದ್ದು, ಕನ್ನಡಿಗರು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ ಹದಿನೈದು ಪೈಸೆ ಮಾತ್ರ ವಾಪಸು ನೀಡುವುದು, ಮೋದಿಯವರ ಆಶೀರ್ವಾದವೇ ಶಾಪವೇ?” ಎಂದು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರದ ಅನುದಾನ ಕಡಿತದಿಂದಾಗಿ ರಾಜ್ಯ ಸರ್ಕಾರ ಮಾಡಿಕೊಂಡ ಸಾಲ ರೂ.2.40 ಲಕ್ಷ ಕೋಟಿಗಳಿಂದ ರೂ.5.60 ಲಕ್ಷ ಕೋಟಿಗೆ ಏರಿಕೆಯಾಗಿದ್ದು ಮತ್ತು ಪ್ರತಿಯೊಬ್ಬ ಕನ್ನಡಿಗನ ತಲೆಮೇಲೆ ರೂ.86,000 ಸಾಲದ ಹೊರೆ ಬಿದ್ದಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಕುಟುಕಿದ್ದಾರೆ.

Advertisements

“2019ರಲ್ಲಿ ನೆರೆ ಹಾವಳಿ ನಷ್ಟಕ್ಕೆ ರೂ.35,000 ಕೋಟಿ ಪರಿಹಾರ ಕೇಳಿದ್ದರೂ, ಕೇವಲ ರೂ.1,869 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಟ್ಟಿದ್ದು, 2020 ಮತ್ತು 2021ರಲ್ಲಿಯೂ ಇದೇ ಅನ್ಯಾಯ ಮುಂದುವರಿಸಿದ್ದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕನ್ನಡಿಗರು ಕಟ್ಟಿರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಿಂಡಿಕೇಟ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಗಳನ್ನು ನುಂಗಿ ಹಾಕಲಾಗಿದೆ. ಕನ್ನಡಿಗರ ಹೆಮ್ಮೆಯ ‘ನಂದಿನಿ’ಯನ್ನು ಗುಜರಾತ್ ಮೂಲದ ‘ಅಮುಲ್’ ಆಪೋಶನ ತೆಗೆದುಕೊಳ್ಳಲು ಹೊರಟಿರುವುದು ಏನು? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಮೌಢ್ಯಕ್ಕೆ ಸೆಡ್ಡು; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

“ಐಬಿಪಿಎಸ್ ಮತ್ತು ಎಲ್ಐಸಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲಿಕ್ಕೆ ಅವಕಾಶ ನೀಡದೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿ ಕನ್ನಡಿಗ ಯುವಜನರ ಹೊಟ್ಟೆಗೆ ಹೊಡೆದಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಕರ್ನಾಟಕ ಗಡಿಪ್ರದೇಶವನ್ನು ಆಕ್ರಮಿಸುವ ದುರುದ್ದೇಶದಿಂದ ಮಹಾರಾಷ್ಟ್ರದ ಬಿಜೆಪಿ ಬೆಂಬಲಿತ ಸರ್ಕಾರ ನಮ್ಮ ರಾಜ್ಯದ 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಹೊರಟಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದಿದ್ದಾರೆ.

“ಮಹದಾಹಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲು ವಿಳಂಬ ಮಾಡಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ನೆರವಿನ ಕೊರತೆಯಿಂದ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಕೇಳಿದ್ದಾರೆ.

“ರಾಜ್ಯ ಬಿಜೆಪಿ ನಾಯಕರು 40% ಕಮಿಷನ್ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳನ್ನು ನುಂಗಿ ಹಾಕಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಸಿದ್ದರಾಮಯ್ಯ ಅವರು ಜೆಪಿ ನಡ್ಡಾ ಅವರು ಮುಂದೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X