ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

Date:

Advertisements

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, “ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಪೋಸ್ಟ್ ಮಾಡಲಾಗಿದ್ದು ರಾಹುಲ್ ಗಾಂಧಿ, “ಬಿಜೆಪಿ-ಆರ್‌ಎಸ್‌ಎಸ್ ಭಾರತದ ಕಲ್ಪನೆಗೆ ವಿರುದ್ಧವಾಗಿವೆ. ಕಾನೂನಿನ ಚೌಕಟ್ಟಿನ ಮೇಲೆ ದಾಳಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ನೀವು ಕಾಂಗ್ರೆಸ್ ಕಾರ್ಯಕರ್ತರು, ನಮ್ಮ ಬೆನ್ನೆಲುಬು ಮತ್ತು ನಮ್ಮ ಪಕ್ಷದ ಡಿಎನ್‌ಎ. ನೀವು ನಮ್ಮ ಸಿದ್ಧಾಂತವನ್ನು ಅರ್ಥಮಾಡಿಕೊಂಡಿದ್ದೀರಿ ಮತ್ತು ಅದಕ್ಕಾಗಿ ನೀವು ಪ್ರತಿದಿನ ಹೋರಾಡುತ್ತಿದ್ದೀರಿ. ನೀವು ಇಲ್ಲದೆ ನಮಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಇತ್ತೀಚಿನ ಮೋದಿ ಸಂದರ್ಶನ ಫ್ಲಾಪ್ ಶೋ, ಬಿಜೆಪಿ 150 ಸ್ಥಾನ ಕೂಡಾ ದಾಟಲ್ಲ: ರಾಹುಲ್ ಗಾಂಧಿ

“ಪ್ರಸ್ತುತ ಚುನಾವಣೆ ಆರಂಭವಾಗುತ್ತಿದೆ. ಆದರೆ ಬಿಜೆಪಿ-ಆರ್‌ಎಸ್‌ಎಸ್ ಭಾರತದ ಕಲ್ಪನೆಗೆ ವಿರುದ್ಧವಾಗಿದೆ. ಅವರು ನಮ್ಮ ಸಂವಿಧಾನ, ದೇಶದ ಪ್ರಜಾಪ್ರಭುತ್ವ ರಚನೆ, ಇಸಿಐ ಸೇರಿದಂತೆ ಭಾರತದ ಕಾನೂನು ಚೌಕಟ್ಟಿನ ಮೇಲೆ ದಾಳಿ ಮಾಡುತ್ತಿದ್ದಾರೆ. ನೀವು ಆರ್‌ಎಸ್‌ಎಸ್ ಸಿದ್ದಾಂತದ ವಿರುದ್ಧವಾಗಿ ಬೀದಿಗಳಲ್ಲಿ, ಹಳ್ಳಿಗಳಲ್ಲಿ ಮತ್ತು ಎಲ್ಲೆಡೆ ಹೋರಾಡುತ್ತೀರಿ, ನೀವು ರಕ್ಷಕರು” ಎಂದು ರಾಹುಲ್ ತಿಳಿಸಿದ್ದಾರೆ.

“2024 ರ ಲೋಕಸಭಾ ಚುನಾವಣೆ ವೇಳೆ ಭಾರತದ ಜನರ ಪ್ರಮುಖ ವಿಚಾರಗಳನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸಲು ನೀವು ನಮಗೆ ಸಹಾಯ ಮಾಡಿದ್ದೀರಿ. ನಾವು ನಿಮ್ಮನ್ನು ಅವಲಂಬಿಸಿದ್ದೇವೆ ಮತ್ತು ನಾವು ನಿಮ್ಮನ್ನು ಪ್ರೀತಿಸುತ್ತೇವೆ. ನಾನು ನಿಮಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ನಾವು ಬಿಜೆಪಿ ಮತ್ತು ಅವರ ಸಿದ್ಧಾಂತವನ್ನು ಸೋಲಿಸಲಿದ್ದೇವೆ” ಎಂದು ಕೂಡಾ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ?   ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

18 ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡಲು 2024 ರ ಲೋಕಸಭೆ ಚುನಾವಣೆಯು ಏಪ್ರಿಲ್ 19ರಿಂದ ಜೂನ್ 1ರವರೆಗೆ ಏಳು ಹಂತಗಳಲ್ಲಿ ನಡೆಯಲಿವೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X