ಪಿಎಸ್​ಐ ಕೇಸ್​​ನಲ್ಲಿ ಅರೆಸ್ಟ್ ಆಗಿದ್ದ ದಿವ್ಯಾ ಹಾಗರಗಿ ಜೊತೆ ಕಾಣಿಸಿಕೊಂಡ ಉಮೇಶ್‌ ಜಾದವ್‌

Date:

Advertisements

ಪಿಎಸ್​ಐ ಕಿಂಗ್ ಪಿನ್​​ ಆರ್ ​ಡಿ ಪಾಟೀಲ್ ನಿವಾಸಕ್ಕೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿದ್ದು ಚರ್ಚೆಯಾಗುತ್ತಿರುವ ನಡುವೆ ಗುರುವಾರ ಉಮೇಶ್ ಜಾಧವ್ ಅವರು ಪಿಎಸ್​ಐ ಕೇಸ್​​ನಲ್ಲಿ ಅರೆಸ್ಟ್ ಆಗಿದ್ದ ದಿವ್ಯಾ ಹಾಗರಗಿ ಜೊತೆ ಫೋಟೋಗೆ ಪೋಸ್​ ನೀಡಿರುವುದು ವೈರಲ್‌ ಆಗಿದೆ.

ರಾಮನವಮಿ ಮೆರವಣಿಗೆ ವೇಳೆ ತೆಗೆಸಿಕೊಂಡ ಫೋಟೋವನ್ನು ಉಮೇಶ್‌ ಜಾದವ್​ ಫೇಸ್ ಬುಕ್​ನಲ್ಲಿ ಹಾಕಿಕೊಂಡಿದ್ದಾರೆ.

ಪಿಎಸ್‌ಐ ಪ್ರಕರಣದ ಕಿಂಗ್ ಪಿನ್​​ ಆರ್ ಡಿ ಪಾಟೀಲ್ ಬೆಂಬಲಯಾಚಿಸಿದ್ದ ಬಿಜೆಪಿ ಸಂಸದರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಲಕ್ಷಾಂತರ ಯುವಕರ ಭವಿಷ್ಯಕ್ಕೆ ಕೊಳ್ಳಿಯಿಟ್ಟ ಆರೋಪಿಗಳ ಜೊತೆ ಉಮೇಶ ಜಾದವ್ ಪೋಸ್ ಕೊಡುತ್ತಿರುವುದು ಕ್ಷೇತ್ರದಲ್ಲಿ ಅವರ ವಿರುದ್ಧ ಅಸಮಾಧಾನ ಮಾತುಗಳು ಕೇಳಿಬರುತ್ತಿವೆ.

Advertisements

ಆರ್‌ ಡಿ ಪಾಟೀಲ್ ಈಗ ಜೈಲುಪಾಲಾಗಿದ್ದಾನೆ. ಪಿಎಎಸ್​ ಪರೀಕ್ಷೆ ಮಾತ್ರವಲ್ಲ ವಿವಿಧ ಬೋರ್ಡ್​ ಪರೀಕ್ಷೆಗಳಲ್ಲೂ ಈ ಆರ್​ಡಿ ಪಾಟೀಲ್​ ಕಿಂಗ್ ಪಿನ್ ಆಗಿದ್ದಾನೆ. ಆದರೆ ಆ‌ರ್‌ ಟಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗುವ ಸಾಧ್ಯತೆ ಕಾಣುತ್ತಿದೆ.

ಸ್ಥಳೀಯ ಕಾಂಗ್ರೆಸ್‌ ನಾಯಕರು ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡು ಜಾದವ್‌ ವಿರುದ್ಧ ಪ್ರಚಾರ ಸಭೆಗಳಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X