ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

Date:

Advertisements

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್‌ ಜಿಲ್ಲೆಯ ಮಿಷನರಿ ಶಾಲೆಯಲ್ಲಿ ಎರಡು ದಿನಗಳ ಹಿಂದೆ(ಏ.15) ನಡೆಸಿದೆ

ಈ ನಡುವೆ ವಿದ್ಯಾರ್ಥಿಗಳ ಪೋಷಕರು ಕೂಡ ಪ್ರಾಂಶುಪಾಲರು ಒಳಗೊಂಡು ಶಾಲೆಯ ಇಬ್ಬರು ಸಿಬ್ಬಂದಿ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಹೈದರಾಬಾದ್‌ನಿಂದ 250 ಕಿಮೀ ದೂರದಲ್ಲಿರುವ ಕನ್ನೆಪಲ್ಲಿ ಗ್ರಾಮದಲ್ಲಿ ಇರುವ ಮದರ್‌ ತೆರೇಸಾ ಪ್ರೌಢಶಾಲೆಯಲ್ಲಿ ಪ್ರಾಂಶುಪಾಲರಾದ ಜೈಮೊನ್‌ ಜೋಸೆಫ್ ಅವರು ಕೆಲವು ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದರು.

Advertisements

ಪ್ರಾಂಶುಪಾಲರ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳು ಹನುಮಾನ್‌ ಧೀಕ್ಷ ಕಾರ್ಯಕ್ರಮದ ಅಂಗವಾಗಿ ಉಡುಪು ಧರಿಸಿರುವುದಾಗಿ ತಿಳಿಸಿದ್ದರು. ಈ ವಿಷಯದ ಬಗ್ಗೆ ಚರ್ಚಿಸಲು ತಮ್ಮ ಪೋಷಕರನ್ನು ಕರೆದುಕೊಂಡು ಬರುವಂತೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೂಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಗುಂಪೊಂದು ಶಾಲೆಯ ಮೇಲೆದಾಳಿ ನಡೆಸಿ ಶಾಲೆಯ ಕೆಲವು ಆಸ್ತಿಪಾಸ್ತಿಗಳನ್ನು ನಾಶಪಡಿಸಿದೆ. ಇಬ್ಬರು ಸಿಬ್ಬಂದಿ ಮೇಲೆಯೂ ದಾಳಿ ನಡೆಸಲಾಗಿದೆ.

ಗಲಭೆ ನಡೆದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಆಚೆ ಕಳಿಸಿದ್ದಾರೆ. ವೈರಲ್ ಆಗುತ್ತಿರುವ ಒಂದು ವಿಡಿಯೋದಲ್ಲಿ ಗುಂಪು ಮದರ್‌ ತೆರೇಸಾ ಶಾಲೆಯ ಆವರಣದಲ್ಲಿ ಕಲ್ಲುಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ.

ಗುಂಪಿನಲ್ಲಿದ್ದ ಕೆಲವರು ಪ್ರಾಂಶುಪಾಲರನ್ನು ಸುತ್ತುವರಿದು ಹಣೆಗೆ ಕುಂಕುಮ ಇಡುವಂತೆ ಒತ್ತಾಯಿಸಿದ್ದು, ಕ್ಷಮೆ ಕೇಳುವಂತೆ ಆಗ್ರಹಿಸಿದ ಫೋಟೋ ಹಾಗೂ ಭಾವಚಿತ್ರಗಳು ವೈರಲ್ ಆಗಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X