ಮತದಾರರಿಗೆ ಗುರುತಿನ ಚೀಟಿ: ಸುಪ್ರೀಂ ಪ್ರಶ್ನೆಗೆ ಅಪಾಯದ ಕೆಲಸ ಎಂದ ಚುನಾವಣಾ ಆಯೋಗ

Date:

Advertisements

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆಯಲ್ಲಿ ಪಾವಿತ್ರತೆ ಹೊಂದಿರಬೇಕು ಎಂದು ಚುನಾವಣಾ ಆಯೋಗ ಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

“ಇದೊಂದು ಚುನಾವಣಾ ಪ್ರಕ್ರಿಯೆ. ಇಲ್ಲಿ ಪಾವಿತ್ರ್ಯತೆ ಇರಬೇಕು. ಇಲ್ಲಿ ಏನೋ ನಡೆಯುತ್ತಿದೆ ಎಂಬ ಆತಂಕ ಯಾರೊಬ್ಬರಿಗೂ ಅನಿಸಬಾರದು” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ ಪೀಠ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತು.

ಇವಿಎಂಗಳಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ವಿವಿಪ್ಯಾಟ್ ಮೂಲಕ ಗುರುತಿನ ಚೀಟಿ ನೀಡುವ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಚುನಾವಣಾ ಆಯೋಗದ ಹಿರಿಯ ನ್ಯಾಯವಾದಿ ಮಣೀಂದರ್ ಸಿಂಗ್ ಹಾಗೂ ಚುನಾವಣಾ ಅಧಿಕಾರಿಗಳು ನ್ಯಾಯಾಲಯ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಮತದಾರರು ತಮ್ಮ ಮತದಾನದ ನಂತರ ಗುರುತಿನ ಚೀಟಿ ಪಡೆಯುವ ಸಾಧ್ಯತೆ ಇದೆಯೆ ಎಂದು ನ್ಯಾಯಾಲಯವು ಚುನಾವಣಾ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಆಯೋಗದ ಪರ ವಕೀಲರು ಮತದಾನದ ನಂತರ ಗುರುತಿನ ಚೀಟಿ ನೀಡಿದರೆ ಮತದ ಗೌಪ್ಯತೆಗೆ ಧಕ್ಕೆ ತರುತ್ತದೆಯಲ್ಲದೆ ಮತಗಟ್ಟೆಯ ಹೊರಗೆ ಇದು ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಲ್ಲದೆ ಗುರುತಿನ ಚೀಟಿಯನ್ನು ಇತರರು ಹೇಗೆ ಬಳಸುತ್ತಾರೆ ಎಂಬುದನ್ನು ನಾವು ಹೇಳಲು ಸಾಧ್ಯವಿಲ್ಲ. ಎಣಿಕೆ ಪ್ರಕ್ರಿಯೆಯಲ್ಲೂ ಹಲವು ಸಮಸ್ಯೆಗಳಾಗುತ್ತವೆ ಎಂದು ಉತ್ತರ ನೀಡಿದರು.

ಮತದಾನದ ಪ್ರಕ್ರಿಯೆಯಲ್ಲಿ ಇವಿಎಂನಲ್ಲಿ ಮತದಾರರು ಮತ ಚಲಾಯಿಸಿದ ನಂತರ ವಿವಿಪ್ಯಾಟ್‌ನಲ್ಲಿ ಮತಚೀಟಿಯ ಚಿಹ್ನೆ ಕಾಣಿಸಿಕೊಳ್ಳುತ್ತದೆ. ಈ ಯಂತ್ರಗಳನ್ನು ಇಂಜಿನಿಯರ್‌ಗಳ ಉಪಸ್ಥಿತಿಯಲ್ಲಿ ಮತದಾನಕ್ಕೂ ಮುನ್ನ ಪರಿಶೀಲಿಸಲಾಗುತ್ತದೆ ಎಂದು ಆಯೋಗದ ವಕೀಲರು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಅರ್ಜಿದಾರರು ಹೇಳಿದಂತೆ ನಾವು ಯಾವುದನ್ನು ಮುಚ್ಚಿಡುತ್ತಿಲ್ಲ ಎಂದು ಆಯೋಗದ ಪರ ವಕೀಲರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಮತದಾರರ ನಂಬಿಕೆಯಂತೆ ನಿರ್ವಹಿಸಬೇಕು ಹಾಗೂ ಸುರಕ್ಷಿತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X