ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

Date:

Advertisements

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು ಆರ್‌ಟಿಐನಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರ ನೀಡಿದೆ.

ಮಹಾತ್ಮ ಗಾಂಧಿ, ಜವಾಹರ್‌ಲಾಲ್‌ ನೆಹರು, ಸರ್ದಾರ್‌ ವಲ್ಲಬಾಯಿ ಪಟೇಲ್, ಹಾಲಿ ರಾಷ್ಟ್ರಪತಿ, ಹಾಲಿ ಪ್ರಧಾನಿ, ಭಾರತ ಮಾತೆ, ಪಂಡಿತ್‌ ದೀನ್‌ ದಾಯಳ್ ಉಪಾಧ್ಯಾಯ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರಗಳನ್ನು ಮಾತ್ರ ಅಧಿಕೃತವಾಗಿ ಇಡಲು ಅನುಮತಿಸಲಾಗಿದೆ ಎಂದು ಗುಜರಾತ್‌ನ ಸರ್ಕಾರ ಉತ್ತರ ಕೊಟ್ಟಿದೆ.

ಕೆಲವು ಜಿಲ್ಲಾ ಕಚೇರಿಗಳಲ್ಲಿ ಸ್ಥಳೀಯ ಹುತಾತ್ಮರ ಭಾವಚಿತ್ರಗಳನ್ನು ಅನುಮತಿಸಲಾಗಿದೆ ಎಂದು ಸರ್ಕಾರ ತನ್ನ ಉತ್ತರದಲ್ಲಿ ತಿಳಿಸಿದೆ.

Advertisements

ಗುಜರಾತ್‌ನ ಭಾವ್‌ನಗರದ ದಲಿತ ಹಕ್ಕುಗಳ ಕಾರ್ಯಕರ್ತ ದಾಹ್ಯಾಬಾಯಿ ಚೌಹಾಣ್ ಅವರು ಗುಜರಾತ್‌ನ ಸರ್ಕಾರಿ ಕಚೇರಿಗಳಲ್ಲಿ ಅಲಂಕರಿಸಿರುವ ಅಧಿಕೃತ ಭಾವಚಿತ್ರಗಳ ಬಗ್ಗೆ ಸಾಮಾನ್ಯ ಆಡಳಿತ ಇಲಾಖೆ(ಜಿಎಡಿ)ಗೆ ಅರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಚೌಹಾಣ್ ಅವರು ಕೆಲವು ಸರ್ಕಾರಿ ಕಚೇರಿಗಳಲ್ಲಿ ಅನಧಿಕೃತವಾಗಿ ಇಟ್ಟಿರುವ ಭಾವಚಿತ್ರಗಳ ಬಗ್ಗೆಯೂ ಪ್ರಶ್ನಿಸಿದ್ದಾರೆ. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿರುವ ಅನಧಿಕೃತ ದೇವರ ಭಾವಚಿತ್ರಗಳ ವಿವರಗಳನ್ನು ಕೂಡ ಕೇಳಿದ್ದಾರೆ.

ಚೌಹಾಣ್ ಅವರ ಪ್ರಶ್ನೆಗೆ ಜಿಎಡಿಯ ಕಾರ್ಯದರ್ಶಿಯಾದ ಎಂ ಆರ್‌ ಮಲಿಕ್ ಉತ್ತರಿಸಿದ್ದು,ಸರ್ಕಾರಿ ಕಚೇರಿಗಳಲ್ಲಿ ಇಂತಹ ಭಾವಚಿತ್ರಗಳನ್ನು ಅನಧಿಕೃತವಾಗಿ ಬಳಸಲು ಯಾರಿಗೂ ಜವಾಬ್ದಾರಿ ನೀಡಿಲ್ಲ. ಸರ್ಕಾರ ಸರ್ಕಾರಿ ಕಚೇರಿಗಳಲ್ಲಿರುವ ದೇವರ ಭಾವಚಿತ್ರಗಳನ್ನು ಪಟ್ಟಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಹಾಗೂ ಸಂವಿಧಾನವು ಸರ್ಕಾರಿ ಕಚೇರಿಗಳಲ್ಲಿ ಧಾರ್ಮಿಕ ಭಾವಚಿತ್ರಗಳನ್ನು ಬಳಸಲು ನಿಷೇಧಿಸಲಾಗಿದೆ. ಆದರೆ ಹಲವು ಕಚೇರಿಗಳಲ್ಲಿ ಈ ಪದ್ಧತಿಯಿದೆ. ಹಲವು ಕಚೇರಿಗಳಲ್ಲಿ ದೇವರ ಭಾವಚಿತ್ರಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸಂಕೇತಗಳಿವೆ. ಜಾತ್ಯತೀತ ರಾಷ್ಟ್ರವಾಗಿ ಅನಧಿಕೃತ ಭಾವಚಿತ್ರಗಳನ್ನು ಬಳಸುವಂತಿಲ್ಲ. ಈ ಕಾರಣಕ್ಕಾಗಿ ನಾನು ಅರ್ಜಿ ಸಲ್ಲಿಸಿದೆ. ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರವನ್ನು ಸರ್ಕಾರಿ ಅಧಿಕೃತ ಭಾವಚಿತ್ರಗಳ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೆ ನಾನು ಹೋರಾಟ ನಡೆಸುತ್ತೇನೆ. ಇದು ಸರ್ಕಾರದ ತಾರತಮ್ಯವನ್ನು ಸೂಚಿಸುತ್ತದೆ” ಎಂದು ಚೌಹಾನ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X